• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಸ್ಲೋ ಪಾಯ್ಸನ್ ಬಳಸಿ ಬಾಲಕೃಷ್ಣ ಹತ್ಯೆ, ಆರೋಪಿಗಳ 5 ತಿಂಗಳ ಕೊಲೆ ಸಂಚು ಬಯಲು

Coastal Times by Coastal Times
October 29, 2024
in ಕ್ರೈಮ್ ನ್ಯೂಸ್
ಉಡುಪಿ: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ ಆರೋಪ – ಪತ್ನಿ ಸೇರಿ ಇಬ್ಬರು ಸೆರೆ
148
VIEWS
WhatsappTelegramShare on FacebookShare on Twitter

ಉಡುಪಿ, ಅ 29: ಪತಿ ಬಾಲಕೃಷ್ಣನನ್ನು (44) ಕೊಲೆ ಮಾಡಲು ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ಹೇಗೆ ಪ್ಲಾನ್​ ಮಾಡಿದ್ದರು ಎಂಬ ರೋಚಕ ಅಂಶ ಬಯಲಾಗಿದೆ. ಬಾಲಕೃಷ್ಣ ಅವರನ್ನು ಕೊಲೆ ಮಾಡಲು ಆರೋಪಿಗಳು ಐದು ತಿಂಗಳ ಹಿಂದೆಯೇ ಸಂಚು ರೂಪಿಸಿದ್ದರು. ಬಾಲಕೃಷ್ಣ ಅವರಿಗೆ ಸ್ಲೋ ಪಾಯ್ಸನ್​​ ನೀಡಿ ಕೊಲೆ ಮಾಡಬೇಕೆಂದು ಆರೋಪಿಗಳು ಮೊದಲೆ ನಿರ್ಧರಿಸಿದ್ದರು.

ಅದರಂತೆ, ಬಾಲಕೃಷ್ಣ ಅವರನ್ನು ಕೊಲೆ ಮಾಡಲು ಪ್ರತಿಮಾ ಪ್ರಿಯಕರ ದಿಲೀಪ್​ ಹೆಗ್ಡೆ ಸ್ಲೋ ಪಾಯ್ಸನ್​​​ಗಾಗಿ ಹುಡಕಾಟ ನಡೆಸಿದ್ದನು. ಸ್ಲೋ ಪಯ್ಸಾನ್​​ ಹೇಗೆ ಕಾರ್ಯ ನಿರ್ವಹಿಸುತ್ತದೆ? ಯಾವ ಸ್ಲೋ ಪಾಯ್ಸನ್​​ ನೀಡಿದರೆ ವ್ಯಕ್ತಿ ಸಾಯುತ್ತಾನೆ ಎಂದು ಆರೋಪಿ ದಿಲೀಪ್ ಹೆಗ್ಡೆ ಗೂಗಲ್​ನಲ್ಲಿ ಹುಡುಕಾಡಿದ್ದನು. ಆಗ, ಆರ್ಸೆನಿಕ್ ಟ್ರೈಆಕ್ಸೈಡ್ ಎಂಬ ರಾಸಾಯನಿಕ ವಸ್ತು ಬಗ್ಗೆ ತಿಳಿದಿದೆ.

ನಂತರ, ಆರ್ಸೆನಿಕ್ ಟ್ರೈಆಕ್ಸೈಡ್ ಹೇಗೆ ಕಾರ್ಯ ನಿರ್ವಹಿಸುತ್ತದೆ? ಆರ್ಸೆನಿಕ್ ಟ್ರೈಆಕ್ಸೈಡ್ ಸೇವಿಸಿದ ಮೇಲೆ ಎಷ್ಟು ದಿನದ ಬಳಿಕ ಮನುಷ್ಯ ಸಾಯುತ್ತಾನೆ ಎಂಬೆಲ್ಲ ವಿಚಾರದ ಬಗ್ಗೆ ತಿಳಿದುಕೊಂಡಿದ್ದಾನೆ. ಇನ್ನು, “ಆರ್ಸೆನಿಕ್ ಟ್ರೈಆಕ್ಸೈಡ್ ರಾಸಾಯನಿಕ ವಸ್ತು ಹೆಚ್ಚು ವಿಷಕಾರಿ ಮತ್ತು ಬಹುಮುಖ ಸಂಯುಕ್ತ ವಸ್ತು. ಇದನ್ನು ಶಾಲಾ-ಕಾಲೇಜುಗಳ ಲ್ಯಾಬ್‌ಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಬಿಳಿ, ಹಳದಿ ಬಣ್ಣದ ಪುಡಿ. ವಾಸನೆ ಇರುವುದಿಲ್ಲ.” ಆರೋಪಿ ದಿಲೀಪ್​ ಹೆಗ್ಡೆ ಜೂನ್ ತಿಂಗಳಲ್ಲಿ ಉಡುಪಿಯ ರಮನ್ಸ್ ಲ್ಯಾಬ್​​ನಲ್ಲಿ ಆರ್ಸೆನಿಕ್ ಟ್ರೈಆಕ್ಸೈಡ್ ಬಗ್ಗೆ ವಿಚಾರಿಸಿದ್ದಾನೆ. ಆಗ, ಆರ್ಸೆನಿಕ್ ಟ್ರೈಆಕ್ಸೈಡ್ ಅನ್ನು ಶಾಲಾ-ಕಾಲೇಜುಗಳ ಲ್ಯಾಬ್​ಗಳಲ್ಲಿ ಬಳಸಲಾಗುತ್ತದೆ ಎಂದು ತಿಳಿದುಕೊಂಡಿದ್ದಾನೆ. ಅಲ್ಲದೇ, ಈ ಆರ್ಸೆನಿಕ್ ಟ್ರೈಆಕ್ಸೈಡ್ ಪೌಡರ್​ ಅನ್ನು ಶಾಲಾ-ಕಾಲೇಜುಗಳಿಗೆ ಹೊರತುಪಡಿಸಿ ಹೊರಗಿನವರಿಗೆ ಸಿಗುವುದಿಲ್ಲ ಎಂಬುವುದನ್ನೂ ತಿಳಿದಿದ್ದಾನೆ.

ಬಳಿಕ, ದಿಲೀಪ್​ ಹೆಗ್ಡೆ “ತಾನು ವೈದಕೀಯ ವಿದ್ಯಾರ್ಥಿ, ಲ್ಯಾಬ್ ಬಳಕೆಗಾಗಿ ಆರ್ಸೆನಿಕ್ ಟ್ರೈಆಕ್ಸೈಡ್ ಬೇಕಾಗಿದೆ” ಅಂತ ಉಡುಪಿಯ ರಮನ್ಸ್ ಲ್ಯಾಬ್​ಗೆ ಕರೆ ಮಾಡಿ, ಆರ್ಡರ್​​ ಮಾಡಿದ್ದಾನೆ. ಬಳಿಕ, ರಮನ್ಸ್ ಲ್ಯಾಬ್​ಗೆ ತೆರಳಿ ಹಣ ಪಾವತಿ ಮಾಡಿದ್ದಾನೆ. ಒಂದು ವಾರದ ಬಳಿಕ ರಮನ್ಸ್ ಲ್ಯಾಬ್ ಸಿಬ್ಬಂದಿ ಆರೋಪಿ ದಿಲೀಪ್​ ಹೆಗ್ಡೆಗೆ ಕರೆ ಮಾಡಿ ವಿಳಾಸ ಕೇಳಿದ್ದಾರೆ. ನಂತರ, ಲ್ಯಾಬ್​ ಸಿಬ್ಬಂದಿ ದಿಲೀಪ್ ವಿಳಾಸಕ್ಕೆ ಆರ್ಸೆನಿಕ್ ಟ್ರೈಆಕ್ಸೈಡ್ ಪಾರ್ಸೆಲ್ ಕಳಿಸಿದ್ದಾರೆ. ಖರೀದಿ ಮಾಡಿದ್ದ ಆರ್ಸೆನಿಕ್ ಟ್ರೈಆಕ್ಸೈಡ್ ಅನ್ನು ಆರೋಪಿ ದಿಲೀಪ್​ ಎರಡು ಪ್ರತ್ಯೇಕ ಬಾಟಲಿಗಳಲ್ಲಿ ತುಂಬಿದ್ದಾನೆ. ಬೇರೆ ಬಾಟಲಿಗೆ ತುಂಬಿದ್ದ ಆರ್ಸೆನಿಕ್ ಟ್ರೈಆಕ್ಸೈಡ್ ಪೌಡರ್​ ಅನ್ನು ಪಾರ್ಲರ್​ನಲ್ಲಿದ್ದ ಪ್ರೇಯಸಿ ಪ್ರತಿಮಾಳಿಗೆ ನೀಡಿದ್ದಾನೆ. ಆಗಸ್ಟ್​​​ವರೆಗೆ ಕಾದು, ನಂತರ ಸ್ಲೋ ಪಾಯ್ಸನ್​​ ನೀಡುವಂತೆ ಪ್ರೇಯಸಿ ಪ್ರತಿಮಾಗೆ ಹೇಳಿದ್ದಾನೆ.

ಅದರಂತೆ, ಪತ್ನಿ ಪ್ರತಿಮಾ ಗಣೇಶೊತ್ಸವ ಸಮಯದಲ್ಲಿ ಊಟದಲ್ಲಿ ಸ್ಲೋ ಪಾಯ್ಸನ್​ ‌ಬೆರೆಸಿ ಪತಿ ಬಾಲಕೃಷ್ಣ ಅವರಿಗೆ ನೀಡಲು ಆರಂಭಿಸಿದ್ದಾಳೆ. ಹೀಗೆ ಪ್ರತಿನಿತ್ಯ ಸ್ವಲ್ಪ ಸ್ವಲ್ಪ ಊಟದಲ್ಲಿ ಬೆರೆಸಿ ನೀಡಿದ್ದಾಳೆ. ದಿನಗಳು ಕಳದಂತೆ ಮೃತ ಬಾಲಕೃಷ್ಣ ಮಾನಸಿಕ ಹಾಗೂ ದೈಹಿಕ ಕ್ಷಮತೆ ಕಳೆದುಕೊಳ್ಳುತ್ತಾ ಹೋದರು. ಆಗಸ್ಟ್ ತಿಂಗಳಲ್ಲಿ ಇವರಿಬ್ಬರ ಅಕ್ರಮ ಸಂಬಂಧ ಬಾಲಕೃಷ್ಣ ಅವರಿಗೆ ತಿಳಿದಿದೆ. ಗಲಾಟೆಯಾಗಿ ವಿಚಾರ ಪೊಲೀಸ್​ ಠಾಣೆ ಮೆಟ್ಟಿಲು ಏರಿದೆ. ಇದೇ ಸಿಟ್ಟಿನಲ್ಲಿ ಪ್ರತಿಮಾ ಆರ್ಸೆನಿಕ್ ಟ್ರೈಆಕ್ಸೈಡ್ ಪೌಡರ್​ ಅನ್ನು ಊಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆರಸಲು ಆರಂಭಿಸಿದ್ದಾಳೆ. ಇದರಿಂದ ಇನ್ನಷ್ಟು ಆರೋಗ್ಯ ಹದಗೆಟ್ಟು ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಕೃಷ್ಣ ಅವರು ಸಾವಿನಿಂದ ಪಾರಾಗಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ಬಾಲಕೃಷ್ಣ ಅವರನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಾಸರಗೋಡು ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ; 150 ಮಂದಿಗೆ ಗಾಯ, 8 ಮಂದಿ ಗಂಭೀರ

Next Post

ದರ್ಶನ್​ಗೆ ದೀಪಾವಳಿ ಉಡುಗೊರೆ: ಹೈಕೋರ್ಟ್‌ ವೈದ್ಯಕೀಯ ಜಾಮೀನು ಮಂಜೂರು

Related Posts

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
49
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ
ಕ್ರೈಮ್ ನ್ಯೂಸ್

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
71
Next Post
ದರ್ಶನ್​ಗೆ ದೀಪಾವಳಿ ಉಡುಗೊರೆ: ಹೈಕೋರ್ಟ್‌ ವೈದ್ಯಕೀಯ ಜಾಮೀನು ಮಂಜೂರು

ದರ್ಶನ್​ಗೆ ದೀಪಾವಳಿ ಉಡುಗೊರೆ: ಹೈಕೋರ್ಟ್‌ ವೈದ್ಯಕೀಯ ಜಾಮೀನು ಮಂಜೂರು

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
25
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d