• About us
  • Contact us
  • Disclaimer
Friday, April 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

Coastal Times by Coastal Times
October 29, 2025
in ಕರಾವಳಿ
ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ
34
VIEWS
WhatsappTelegramShare on FacebookShare on Twitter

ಮಂಗಳೂರು: ವಿಧಾನಸಭಾ ಅಧ್ಯಕ್ಷರ ಕಚೇರಿಯಲ್ಲಿ ಆಡಳಿತಾತ್ಮಕ ಸುಧಾರಣೆ ಹೆಸರಲ್ಲಿ ಕೋಟ್ಯಂತರ ರೂ.ಗಳ ಭ್ರಷ್ಟಾಚಾರ ಮತ್ತು ದುಂದುವೆಚ್ಚವಾಗಿದ್ದು, ಈ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಶಾಸಕರ ಭವನದಲ್ಲಿ ಪ್ರತಿ ಕೊಠಡಿಗೂ ಸ್ಮಾರ್ಟ್ ಡೋರ್ ಲಾಕ್, ಸ್ಮಾರ್ಟ್ ಸೇಫ್ ಲಾಕರ್ಸ್, ಸ್ಮಾರ್ಟ್ ಎನರ್ಜಿ ಸೊಲ್ಯುಶನ್ಸ್, ಸ್ಟೈನ್ ಲೆಸ್ ಸ್ಟೀಲ್ ವಾಟರ್ ಪ್ಯೂರಿಫೈಯರ್ ಗಳನ್ನು ಜೋಡಿಸಲಾಗಿದೆ. ಆದರೆ ಇದರ ಮಾರುಕಟ್ಟೆ ದರಕ್ಕೂ, ಅಲ್ಲಿ ತೋರಿಸಿರುವ ದರಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ಸ್ಮಾರ್ಟ್ ಡೋರ್ ಲಾಕ್ ಗೆ ಮಾರುಕಟ್ಟೆ ದರ 16 ಸಾವಿರ ಇದ್ದರೆ, ಅದನ್ನು ಶಾಸಕರ ಭವನದ ಲೆಕ್ಕದಲ್ಲಿ 49 ಸಾವಿರ ತೋರಿಸಲಾಗಿದೆ. ಸೇಫ್ ಲಾಕರನ್ನು 35 ಸಾವಿರ ತೋರಿಸಲಾಗಿದ್ದು ಅದಕ್ಕೆ ಮಾರುಕಟ್ಟೆಯಲ್ಲಿ 8100 ರೂ. ಇದೆ. ಮಾರುಕಟ್ಟೆಯಲ್ಲಿ 30 ಸಾವಿರ ಇರುವ ಸ್ಮಾರ್ಟ್ ಎನರ್ಜಿ ಸೊಲ್ಯುಶನ್ಸ್ ಅನ್ನು 90,500 ರೂ. ಎಂದು ಲೆಕ್ಕ ತೋರಿಸಲಾಗಿದೆ. ವಾಟರ್ ಪ್ಯೂರಿಫೈಯರಿಗೆ 65 ಸಾವಿರ ದರ ಹಾಕಲಾಗಿದ್ದು ಅದಕ್ಕೆ ಮಾರುಕಟ್ಟೆಯಲ್ಲಿ 16 ಸಾವಿರದಿಂದ 50 ಸಾವಿರದ ವರೆಗೆ ಬೆಲೆ ತೋರಿಸುತ್ತದೆ.

ಮಂಗಳೂರಿನ ವ್ಯಕ್ತಿಯ ಮೂಲಕ ಇದನ್ನು ಮಾಡಿಸಲಾಗಿದ್ದು, ಅಗತ್ಯ ಇಲ್ಲದಿದ್ದರೂ ಶಾಸಕರ ಭವನದ ನವೀಕರಣ ಹೆಸರಲ್ಲಿ 2ರಿಂದ 3 ಪಟ್ಟು ಬಿಲ್ ತೋರಿಸಲಾಗಿದೆ. ಹಣಕಾಸು ಇಲಾಖೆ ಅನುಮತಿ ನೀಡದಿದ್ದರೂ ಮುಖ್ಯಮಂತ್ರಿಯವರ ಮೌಖಿಕ ಅನುಮತಿಯೊಂದಿಗೆ ತುರ್ತಾಗಿ ಮಾಡಬೇಕಾದ ಕೆಲಸವೆಂದು ತೋರಿಸಿ 4ಜಿ ವಿನಾಯಿತಿಯನ್ನೂ ಪಡೆಯಲಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಕ್ಕೆ, ರಸ್ತೆ ಗುಂಡಿ ಮುಚ್ಚುವುದಕ್ಕೂ ಹಣ ಇಲ್ಲದ ಸ್ಥಿತಿ ಇರುವಾಗ ಸ್ಪೀಕರ್ ಖಾದರ್ ಈ ರೀತಿ ದುಂದುವೆಚ್ಚ ಯಾಕೆ ಮಾಡಿದ್ದಾರೆ.

ಯಾವುದೇ ವಸ್ತು ಖರೀದಿಸಲು ಹಣಕಾಸು ಇಲಾಖೆಯ ಅನುಮತಿ ಮತ್ತು ಟೆಂಡರ್ ಸೇರಿದಂತೆ ಹಲವು ನಿಯಮ ಗಳ ಪಾಲನೆಯಾಗಬೇಕು. ಆದರೆ ಇಲ್ಲಿ ಅಂತಹ ನಿಯಮಗಳ ಪಾಲನೆಯಾಗಿಲ್ಲ. ಹಣಕಾಸು ಇಲಾಖೆಯ ಅನುಮತಿ ಇಲ್ಲದೆಯೇ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ. ಇದಲ್ಲದೆ, 5 ದಿನದ ಪುಸ್ತಕ ಮೇಳ ಹೆಸರಲ್ಲಿ ನಾಲ್ಕೂವರೆ ಕೋಟಿ ಬಿಲ್ ಮಾಡಿದ್ದಾರೆ. ಪುಸ್ತಕ ಖರೀದಿ ಅಲ್ಲ, ಕೇವಲ ಮೇಳದ ವೆಚ್ಚವೆಂದು 4.5 ಕೋಟಿ ತೋರಿಸಿದ್ದಾರೆ. ಇದನ್ನು ಮಾಹಿತಿ ಹಕ್ಕಿನಿಂದ ಪಡೆದು ಪತ್ರಿಕೆಯವರೇ ಸುದ್ದಿ ಮಾಡಿದ್ದಾರೆ. ಸಭಾಧ್ಯಕ್ಷ ಪೀಠವನ್ನು ರೋಸ್ ವುಡ್, ಟೀಕ್ ವುಡ್ ನಲ್ಲಿ ಅಲಂಕರಿಸಿ ದುಬಾರಿ ವೆಚ್ಚ ಮಾಡಿದ್ದಾರೆ. ಎಲ್ಲ ಶಾಸಕರಿಗೆ ಗಂಡ ಭೇರುಂಡ ಲಾಂಛನದ ಗೋಡೆ ಗಡಿಯಾರ, ವಿಧಾನಸಭೆಯ ಒಳಗಡೆ 45 ಲಕ್ಷ ವೆಚ್ಚದಲ್ಲಿ ಎಐ ಕ್ಯಾಮರಾ, ಅದರ ಉನ್ನತೀಕರಣಕ್ಕೆ 35 ಲಕ್ಷ, ಶಾಸಕರ ಭವನದ ಎಲ್ಲಾ ಕೊಠಡಿಗಳಿಗೆ ಹೊಸತಾಗಿ ಮಂಚ, ಟೇಬಲ್, ಕುರ್ಚಿಗಳನ್ನು ಹಾಕಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಾಜಗೋಪಾಲ ರೈ, ರವೀಂದ್ರ ಶೆಟ್ಟಿ ಉಳಿದೊಟ್ಟು, ಪೂರ್ಣಿಮಾ, ರಮೇಶ್ ಕಂಡೆಟ್ಟು, ವಸಂತ ಪೂಜಾರಿ, ಅರುಣ್ ಶೇಟ್ ಮತ್ತಿತರರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ; ಚಿಕಿತ್ಸೆ ಫಲಿಸದೆ ಪಡುಬಿದ್ರಿ ಎಎಸ್‌ಐ ಪುತ್ರಿ ಸಾವು

Next Post

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

Related Posts

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
53
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ
ಕರಾವಳಿ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
36
Next Post
ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

Discussion about this post

Recent News

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
53
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d