• About us
  • Contact us
  • Disclaimer
Wednesday, May 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿಯ ಕಿಸ್ಸಿಂಗ್..! ಫೋಟೋ ವೈರಲ್

Coastal Times by Coastal Times
December 29, 2023
in ರಾಜ್ಯ
ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿಯ ಕಿಸ್ಸಿಂಗ್..! ಫೋಟೋ ವೈರಲ್
314
VIEWS
WhatsappTelegramShare on FacebookShare on Twitter

ಚಿಕ್ಕಬಳ್ಳಾಪುರ: ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ಮುಖ್ಯ ಶಿಕ್ಷಕಿಯೊಬ್ಬರು ತಮ್ಮ ಮಗನ ವಯಸ್ಸಿನ ಯುವಕನೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ  ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಲತಾ ಅವರೇ ಈ ರೀತಿ ವರ್ತಿಸಿರುವ ಶಿಕ್ಷಕಿ.

ಹೌದು, SSLC ವಿದ್ಯಾಭ್ಯಾಸ ಮಾಡುತ್ತಿರುವ ಅಪ್ರಾಪ್ತ ಬಾಲಕನೊಂದಿಗೆ ಈ ಶಿಕ್ಷಕಿ ಅಸಭ್ಯವಾಗಿ ವರ್ತಿಸಿರುವುದಲ್ಲದೇ, ಆತನೊಂದಿಗೆ ರೊಮ್ಯಾಟಿಕ್ ಆಗಿ ವರ್ತಿಸಿರುವ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಘಟನೆ ನಡೆದಿದೆ. ಈ ಪೋಟೋಗಳು ಸೋರಿಕೆ ಆಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಕಿ ಪುಷ್ಪಲತಾ ಹೈಸ್ಕೂಲ್‌ ವಿದ್ಯಾರ್ಥಿ ಜೊತೆಗೆ ಮುದ್ದಾಡಿ, ರೋಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಪುಷ್ಪಲತಾ ಈ ರೀತಿ ವರ್ತಿಸಿದ್ದಾರೆ. ಇವರಿಬ್ಬರ ಪೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಪುಪ್ಪಲತಾ ಅವರು ತಾವೊಬ್ಬ ಶಿಕ್ಷಕಿ ಎಂಬುದನ್ನೇ ಮರೆತು ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ವಿವಿಧ ರೀತಿಯಲ್ಲಿ ಪೋಟೋ ತೆಗೆಸಿಕೊಂಡಿದ್ದಾಳೆ. ವಿದ್ಯಾರ್ಥಿ ಶಿಕ್ಷಕಿಗೆ ಮುತ್ತು ಕೊಡುವುದು, ಆಕೆಯನ್ನು ಎತ್ತಿ ಹಿಡಿದಿರುವುದು ಮತ್ತು ಸೀರೆ ಸೆರಗು  ಎಳೆಯುವ ರೊಮ್ಯಾಂಟಿಕ್‌ ಫೋಟೋಗಳಿವೆ.

ಶಿಕ್ಷಕಿಯ ಈ ಅಸಭ್ಯ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ವಿದ್ಯಾರ್ಥಿಯ ಪೋಷಕರು ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಶಾಲೆ ಬಳಿ ತೆರಳಿದ ವಿದ್ಯಾರ್ಥಿಯ ಪೋಷಕರು ಶಿಕ್ಷಕಿ ವಿರುದ್ಧ ಕಿಡಿಕಾರಿದ್ದಾರೆ. ಘಟನೆಯ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದು ತನಿಖೆಗೆ ಆದೇಶಿಸಲಾಗಿತ್ತು.

ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ‘ಮುರುಗಮಲ್ಲ ಸರ್ಕಾರಿ ಶಾಲೆಯ ಶಿಕ್ಷಕರು ಡಿ.22 ರಿಂದ 25ರವರೆಗೂ ಶೈಕ್ಷಣಿಕ ಪ್ರವಾಸ ಹೋಗಲು ಅನುಮತಿ ಪಡೆದಿದ್ದರು. ಅದರಂತೆ ಬಾದಾಮಿ, ಧರ್ಮಸ್ಥಳ, ಯಾನಕ್ಕೆ ಪ್ರವಾಸ ಹೋಗಿದ್ದರು. ಈ ವೇಳೆ ಶಿಕ್ಷಕಿ ಪುಷ್ಪಲತಾ SSLC ಓದುತ್ತಿರುವ ಶಾಲೆಯ ವಿದ್ಯಾರ್ಥಿ ಜೊತೆ ಅಸಭ್ಯವಾಗಿ ವರ್ತಿಸಿರುವ ಫೋಟೋ ತೆಗೆಸಿಕೊಂಡಿರುವ ಬಗ್ಗೆ ಸ್ಥಳೀಯರು ನನಗೆ ದೂರು ನೀಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ರ್ ಶೆಟ್ಟಿ ಆಯ್ಕೆ

Next Post

ಉಡುಪಿ: ಜ.07- 13, ತುಳುನಾಟಕ ಪರ್ಬ

Related Posts

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್
ಕ್ರೈಮ್ ನ್ಯೂಸ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
61
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ
ರಾಜ್ಯ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
24
Next Post
ಉಡುಪಿ: ಜ.07- 13, ತುಳುನಾಟಕ ಪರ್ಬ

ಉಡುಪಿ: ಜ.07- 13, ತುಳುನಾಟಕ ಪರ್ಬ

Discussion about this post

Recent News

ಮಂಗಳೂರು: ಮೇ 20 ರಂದು ಆನ್‌ಲೈನ್ ಫಾರ್ಮಸಿ ವಿರೋಧಿಸಿ ಮೆಡಿಕಲ್ ಬಂದ್: ದ.ಕ.ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ

ಮಂಗಳೂರು: ಮೇ 20 ರಂದು ಆನ್‌ಲೈನ್ ಫಾರ್ಮಸಿ ವಿರೋಧಿಸಿ ಮೆಡಿಕಲ್ ಬಂದ್: ದ.ಕ.ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ

May 19, 2026
20
ಮೇ 29 ರಿಂದ 31 ರವರೆಗೆ ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ

ಮೇ 29 ರಿಂದ 31 ರವರೆಗೆ ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ

May 19, 2026
30
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮೇ 20 ರಂದು ಆನ್‌ಲೈನ್ ಫಾರ್ಮಸಿ ವಿರೋಧಿಸಿ ಮೆಡಿಕಲ್ ಬಂದ್: ದ.ಕ.ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ

ಮಂಗಳೂರು: ಮೇ 20 ರಂದು ಆನ್‌ಲೈನ್ ಫಾರ್ಮಸಿ ವಿರೋಧಿಸಿ ಮೆಡಿಕಲ್ ಬಂದ್: ದ.ಕ.ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ

May 19, 2026
ಮೇ 29 ರಿಂದ 31 ರವರೆಗೆ ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ

ಮೇ 29 ರಿಂದ 31 ರವರೆಗೆ ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ

May 19, 2026
ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d