ಮೈಸೂರು: ಹುಣಸೂರು ತಾಲೂಕಿನ ಚಿನ್ನಾಭರಣ ಮಳಿಗೆಗೆ 5 ಮಂದಿ ಡಕಾಯಿತರು ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಹುಣಸೂರು ಬಸ್ ನಿಲ್ದಾಣದ ಹಿಂದಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಶಾಪ್ಗೆ ಮಧ್ಯಾಹ್ನ ಸುಮಾರು 2.10 ರ ಸಮಯದಲ್ಲಿ ಬೈಕ್ನಲ್ಲಿ ಬಂದ ಐವರು ಮುಸುಕುಧಾರಿಗಳು 7-8ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದ ವೇಳೆ ನುಗ್ಗಿ ದರೋಡೆ ಮಾಡಿದ್ದಾರೆ. 5 ಮಂದಿಯಲ್ಲಿ ನಾಲ್ವರು ಮುಸುಕು ಧರಿಸಿದ್ದರು.
ಓರ್ವ ಎರಡು ಕೈಗಳಲ್ಲೂ ಗನ್ ಹಿಡಿದು ಸಿನಿಮೀಯ ಶೈಲಿಯಲ್ಲಿ ಬೆದರಿಕೆ ಹಾಕಿ, ಕೆಲವೇ ನಿಮಿಷದಲ್ಲಿ ಅಂಗಡಿಯಲ್ಲಿದ್ದ ಅಂದಾಜು 5 ಕೆ.ಜಿ. ಚಿನ್ನಾಭರಣ ದೋಚಿ ಪರಾರಿಯಾಗಿರುವ ಮಾಹಿತಿ ಬಂದಿದೆ. ದರೋಡೆಕೋರರನ್ನು ಸಿಬ್ಬಂದಿ ಹಿಂಬಾಲಿಸಿದ್ದಾರೆ. ಆದರೆ ಹಿಡಿಯಲು ಸಾಧ್ಯವಾಗಿಲ್ಲ. ದರೋಡೆ ನಡೆಸಿದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪರಾರಿಯಾಗುವ ವೇಳೆ ಓರ್ವ ದರೋಡೆಕೋರ ಹೆಲ್ಮೆಟ್ ಬಿಟ್ಟು ಹೋಗಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಹಾಗೂ ಪಟ್ಟಣ ಪೊಲೀಸರು ದೌಡಾಯಿಸಿದ್ದಾರೆ. ಶ್ವಾನದಳ, ಬೆರಳಚ್ಚು ತಂಡ ಪರಿಶೀಲನೆ ನಡೆಸುತ್ತಿದೆ. ಮಾಹಿತಿ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಎಎಸ್ಪಿ ಎಲ್. ನಾಗೇಶ್ ಸ್ಥಳಕ್ಕೆ ತೆರಳಿದ್ದಾರೆ. ಹಾಡಹಗಲೇ ನಡೆದ ದರೋಡೆಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post