• About us
  • Contact us
  • Disclaimer
Tuesday, January 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರಿನ ಮಹಾಲಕ್ಷ್ಮಿ ಜ್ಯುವೆಲರ್ಸ್ ಶಾಪ್ ಗೆ ನಕಲಿ ಅಧಿಕಾರಿಗಳ ದಾಳಿ, 1 ಕೇಜಿ ಚಿನ್ನ ತೆಗೆದುಕೊಂಡು ಪರಾರಿಯಾಗುತ್ತಿದ್ದ ಕಳ್ಳರು ಪೊಲೀಸರ ಬಲಗೆ

Coastal Times by Coastal Times
January 30, 2024
in ಕ್ರೈಮ್ ನ್ಯೂಸ್
ಬೆಂಗಳೂರಿನ ಮಹಾಲಕ್ಷ್ಮಿ ಜ್ಯುವೆಲರ್ಸ್  ಶಾಪ್ ಗೆ ನಕಲಿ ಅಧಿಕಾರಿಗಳ ದಾಳಿ, 1 ಕೇಜಿ ಚಿನ್ನ ತೆಗೆದುಕೊಂಡು ಪರಾರಿಯಾಗುತ್ತಿದ್ದ ಕಳ್ಳರು ಪೊಲೀಸರ ಬಲಗೆ
51
VIEWS
WhatsappTelegramShare on FacebookShare on Twitter

ಬೆಂಗಳೂರು, ಜ 29: ಇತ್ತೀಚಿಗೆ ನಗರದಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದೆ. ಜನವರಿ 27 ರಂದು ಕೆಆರ್​ಪುರಂನಲ್ಲಿರುವ ಚಿನ್ನದ ಅಂಗಡಿ ಮೇಲೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು ದಾಳಿ ಮಾಡಿದ್ದರು. ಆದರೆ ದಾಳಿ ಮಾಡಿದವರು ಅಸಲಿ ಅಧಿಕಾರಿಗಳಲ್ಲ, ಬದಲಿಗೆ ನಕಲಿ ಅಧಿಕಾರಿಗಳು. 45 ನಿಮಿಷದ ಕಾರ್ಯಾಚರಣೆ ಥೇಟ್ ಸಿನಿಮಾ ಕಥೆಯನ್ನೇ ಹೊಲುವ ರೀತಿ ಇದೆ. ಯಾವಾಗ ಇವರು ನಕಲಿ ಅಧಿಕಾರಿಗಳು ಎಂದು ತಿಳಿಯಿತು, ಆಗ 30 ನಿಮಿಷದ ಪೊಲೀಸರ ಕಾರ್ಯಾಚರಣೆ ನಡೆದಿದ್ದು, ಇದು ಪ್ರಕರಣದ ಮೇಜರ್ ಟ್ವಿಸ್ಟ್ ಆಗಿದೆ.

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು ಅಂತ ಹೇಳಿ ಇದೇ ತಿಂಗಳು 27 ರಂದು ಇನೋವ್​ ಕಾರ್​ನಲ್ಲಿ ಎಂಟ್ರಿ ಕೊಟ್ಟಿದ್ದ ನಾಲ್ವರು ಕೆಆರ್​ಪುರಂನಲ್ಲಿರುವ ಮಹಾಲಕ್ಷ್ಮಿ ಜ್ಯುವೆಲರ್ಸ್ ಮೇಲೆ ದಾಳಿ ಮಾಡಿದ್ದರು. ಬೆಂಗಳೂರಿನ ಹಲವು ಬಂಗಾರದ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಅದರಲ್ಲಿ‌ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದೆ ಅಕ್ರಮವಾಗಿ ನೀವು ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ನಮಗೆ ದೊರೆತಿದೆ ಹೀಗಾಗಿ ದಾಳಿ ಮಾಡಿದ್ದೇವೆ ಎಂದು ನಕಲಿ ಅಧಿಕಾರಿಗಳು ಹೇಳಿದ್ದಾರೆ. ಬಳಿಕ 45 ನಿಮಿಷ ಕಾರ್ಯಾಚರಣೆ ನಡೆಸಿದ ನಕಲಿ ಅಧಿಕಾರಿಗಳು, ಅಂಗಡಿಯಲ್ಲಿದ್ದ 80 ಲಕ್ಷ ರೂ. ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡರು.

ಇವೆಲ್ಲವನ್ನೂ ಸೀಜ್ ಮಾಡುವುದಾಗಿ ನಕಲಿ ಅಧಿಕಾರಿಗಳು ಹೇಳಿದ್ದರು. ಬಳಿಕ ಅಂಗಡಿ ಮಾಲಿಕನ ಕೈಗೆ ನಕಲಿ ನೋಟಿಸ್ ನೀಡಿ, ಮುಂದಿನ ವಾರ ತಮಿಳುನಾಡಿನ ಕಚೇರಿಗೆ ಬರುವಂತೆ ಹೇಳಿ ಹೋದರು. ಹೀಗೆ ಹೋಗುವಾಗ ನಕಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ನಕಲಿ ಅಧಿಕಾರಿಗಳು ಚಿನ್ನದ ಅಂಗಡಿಯಿಂದ ಹೊರಡುವಾಗ ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಕಂಡು ಅನುಮಾನಗೊಂಡ ಚಿನ್ನದ ಅಂಗಡಿ ಕೆಲ ಸಿಬ್ಬಂದಿಗಳು, ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಇದನ್ನು ತಿಳಿದ ನಕಲಿ ಅಧಿಕಾರಿಗಳು, ತಪ್ಪಿಸಿಕೊಳ್ಳುವ ಬರದಲ್ಲಿ ಟಿಸಿ ಪಾಳ್ಯದಲ್ಲಿ ಬೈಕ್​​ಗಳಿಗೆ ಗುದ್ದಿದ್ದಾರೆ.

ಇದರಿಂದ ಅನುಮಾನಗೊಂಡ ಚಿನ್ನದ ಅಂಗಡಿಯ ಕೆಲ ಸಿಬ್ಬಂದಿ ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿದ್ದಾರೆ. ಇತ್ತ ಅಂಗಡಿ ಮಾಲೀಕ ಸಹ ಅನುಮಾನಗೊಂಡು ಕೆಆರ್​ಪುರಂ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹಿಂಬಾಲಿಸುತ್ತಿರುವುದನ್ನು ತಿಳಿದ ಆರೋಪಿಗಳು ತಪ್ಪಿಸಿಕೊಳ್ಳುವ ಭರದಲ್ಲಿ ಟಿ.ಸಿ ಪಾಳ್ಯ ಜಂಕ್ಷನ್ ಬಳಿ ಸರಣಿ ಅಪಘಾತವೆಸಗಿದ್ದಾರೆ. ಆದರೆ ಸಿನಿಮೀಯ ಮಾದರಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಪತ್ ಕುಮಾರ್, ಜೊಶಿ ಥಾಮಸ್, ಅವಿನಾಶ್, ಸಂದೀಪ್ ಬಂಧಿತಕ ನಕಲಿ ಅಧಿಕಾರಿಗಳು. ಸಂಪತ್ ಈ ಹಿಂದೆ ಮಂಡ್ಯದಲ್ಲಿ ಸಹ ಕಳ್ಳತನ ಕೃತ್ಯ ಎಸಗಿದ್ದನು. ಈ ಪ್ರಕರಣ ಸಂಬಂಧ ಜೈಲು ವಾಸ ಅನುಭವಿಸಿ ಬಿಡುಗಡೆಯಾಗಿದ್ದನು. ಅದಾದ ಬಳಿಕ ತಮಿಳುನಾಡು ಮೂಲದ ಓರ್ವ ವ್ಯಕ್ತಿಯ ಸಂರ್ಪಕಕ್ಕೆ ಬಂದಿದ್ದಾನೆ. ಆತನ ನಿರ್ದೇಶನದಂತೆ ಈ ಕೃತ್ಯಕ್ಕೆ ಕೈ ಹಾಕಿದ್ದಾನೆ.

ಆರೋಪಿಗಳು ಅರೆಸ್ಟ್​ ಆಗುತ್ತಿದ್ದಂತೆ ತಮಿಳುನಾಡು ಮೂಲದ ಮಾಸ್ಟರ್ ಮೈಂಡ್ ನಾಪತ್ತೆಯಾಗಿದ್ದಾನೆ. ಕೆಆರ್​ಪುರಂ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಕಳ್ಳತನವಾಗಿದ್ದ ಸಂಪೂರ್ಣ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕ ಸ್ಪೋಟ ಪ್ರಕರಣ, ಮಾಲೀಕ ಸಯ್ಯದ್ ಬಶೀರ್ ಬಂಧನ

Next Post

ಸುಟ್ಟಗಾಯದಿಂದ ಪದ್ಮಶ್ರೀವರೆಗೆ: ‘ಬೆಂಕಿಯಲ್ಲಿ ಅರಳಿದ ಹೂವು’ ಡಾ.ಪ್ರೇಮಾ ಧನರಾಜ್ ಅವರ ಬದುಕೇ ಒಂದು ರೋಚಕ ಕಥೆ

Related Posts

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
49
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
76
Next Post
ಸುಟ್ಟಗಾಯದಿಂದ ಪದ್ಮಶ್ರೀವರೆಗೆ: ‘ಬೆಂಕಿಯಲ್ಲಿ ಅರಳಿದ ಹೂವು’ ಡಾ.ಪ್ರೇಮಾ ಧನರಾಜ್ ಅವರ ಬದುಕೇ ಒಂದು ರೋಚಕ ಕಥೆ

ಸುಟ್ಟಗಾಯದಿಂದ ಪದ್ಮಶ್ರೀವರೆಗೆ: 'ಬೆಂಕಿಯಲ್ಲಿ ಅರಳಿದ ಹೂವು' ಡಾ.ಪ್ರೇಮಾ ಧನರಾಜ್ ಅವರ ಬದುಕೇ ಒಂದು ರೋಚಕ ಕಥೆ

Discussion about this post

Recent News

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
7
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
49
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

January 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d