• About us
  • Contact us
  • Disclaimer
Tuesday, December 30, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿ ಮೃತ್ಯು, ಇಬ್ಬರು ಆರೋಪಿಯ ಬಂಧನ

Coastal Times by Coastal Times
January 30, 2024
in ಕ್ರೈಮ್ ನ್ಯೂಸ್
ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿ ಮೃತ್ಯು, ಇಬ್ಬರು ಆರೋಪಿಯ ಬಂಧನ
111
VIEWS
WhatsappTelegramShare on FacebookShare on Twitter

ಬದಿಯಡ್ಕ: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದ್ದು  ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಗ್ರಾಲ್ ಪುತ್ತೂರು ಕೋಟಕುನ್ನುವಿನ ಅನ್ವರ್ (24) ಎಂಬಾತನ ಸ್ನೇಹಿತ ಸಾಹಿಲ್ (21) ಯುವಕ ನನ್ನು ಪೊಲೀಸರು ಬಂಧಿಸಿದ್ದಾರೆ.

ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರ ಹತ್ತನೇ ತರಗತಿ ವಿದ್ಯಾರ್ಥಿನಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15)ರ ಹರೆಯದ ಬಾಲಕಿಯ ಸಾವಿಗೆ ಸಂಬಂಧಿಸಿ ಈ ಇಬ್ಬರನ್ನು ಬಂಧಿಸಲಾಗಿದೆ. ಕಳೆದ ಮಂಗಳವಾರ ಸಂಜೆ ಮನೆಯೊಳಗೆ ವಿಷ ಸೇವಿಸಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಳು. ಬಾಲಕಿಯನ್ನು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ನಿನ್ನೆ ಮುಂಜಾನೆ ಮೃತಪಟ್ಟಿದ್ದಾಳೆ.

ಬಾಲಕಿ ವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ ಬದಿಯಡ್ಕ ಪೊಲೀಸರು ಹಾಗೂ ಮೆಜಿಸ್ಟ್ರೇಟ್ ಬಾಲಕಿ ಯಿಂದ ಹೇಳಿಕೆ ದಾಖಲಿಸಿ ಕೊಂಡಿದ್ದರು. ಆರೋಪಿಗಳಿಂದ ನಿರಂತರ ಉಂಟಾದ ಉಪಟಳ ಹಾಗೂ ಬೆದರಿಕೆಯನ್ನು ಸಹಿಸಲಾಗದೆ ವಿಷ ಸೇವಿಸಿರುವುದಾಗಿ ಬಾಲಕಿ ಹೇಳಿದ್ದಳು. ಇದರಂತ ಪೋಕ್ಸ್ ಕೇಸು ದಾಖಲಿಸಿಕೊಂಡ ಈ ಇಬ್ಬರನ್ನು ಬಂಧಿಸಿದ್ದಾರೆ.

ಇದೇ ವೇಳೆ ಬಾಲಕಿಯನ್ನು ಆರೋಪಿಗಳು ಮಂಗಳೂರು ಸಹಿತ ವಿವಿಧ ಸ್ಥಳಗಳಿಗೆ ಕರೆದೊಯ್ದು ಹಾಗೂ ಕಾರಿನೊಳಗೆ ಕಿರುಕುಳ ನೀಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಕಿರುಕುಳ ಸಂದರ್ಭದಲ್ಲಿ ಕಾರು ಚಲಾಯಿಸಿದುದು ಸಾಹಿಲ್ ಆಗಿದ್ದಾನೆಂದೂ ತಿಳಿದುಬಂದಿದೆ.

ಬಾಲಕಿಯನ್ನು ಆರೋಪಿ ಅನ್ವರ್ ಸಾಮಾಜಿಕ ತಾಣದ ಮೂಲಕ ಪರಿಚಯಗೊಂಡಿದ್ದಾ ನೆನ್ನಲಾಗಿದೆ. ಬಳಿಕ ವಿವಿಧೆಡೆಗೆ ಕರೆದೊಯ್ದು ಕಿರುಕುಳ ನೀಡಿದ್ದು, ಈ ವಿಷಯ ಬಹಿರಂಗಪಡಿಸಿದರೆ ತಂದೆಯನ್ನು ಕೊಲ್ಲುವುದಾಗಿ ನೇರವಾಗಿಯೂ ಫೋನ್ ಮೂಲಕವೂ ಆರೋಪಿಗಳು ಬೆದರಿಕೆಯೊಡ್ಡಿರುವುದಾಗಿಯೂ ಬಾಲಕಿ ಪೊಲೀಸರಲ್ಲಿ ತಿಳಿಸಿದ್ದಾಳೆನ್ನಲಾಗಿದೆ. ಇದರಂತೆ ಪೋಕ್ಸ್‌ ಕಾಯ್ದೆ ಹಾಗೂ ಆತ್ಮಹತ್ಯೆ ಪ್ರೇರಣೆ ಆರೋಪದಂತೆ ಆರೋಪಿಗಳ ವಿದರುದ್ಧ ಕೇಸು ದಾಖಲಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುಟ್ಟಗಾಯದಿಂದ ಪದ್ಮಶ್ರೀವರೆಗೆ: ‘ಬೆಂಕಿಯಲ್ಲಿ ಅರಳಿದ ಹೂವು’ ಡಾ.ಪ್ರೇಮಾ ಧನರಾಜ್ ಅವರ ಬದುಕೇ ಒಂದು ರೋಚಕ ಕಥೆ

Next Post

ಪತ್ನಿ, ಮಕ್ಕಳ ಎದುರಲ್ಲೇ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಪ್ರಕರಣದ ಎಲ್ಲಾ 15 ಮಂದಿಗೆ ಗಲ್ಲು ಶಿಕ್ಷೆ

Related Posts

ಮಂಗಳೂರು: ಷೇರು ಮಾರುಕಟ್ಟೆಯ ಲಾಭದ ಆಮಿಷ; 85.68 ಲಕ್ಷ ರೂ. ವಂಚನೆ
ಕ್ರೈಮ್ ನ್ಯೂಸ್

ಮಂಗಳೂರು: ಷೇರು ಮಾರುಕಟ್ಟೆಯ ಲಾಭದ ಆಮಿಷ; 85.68 ಲಕ್ಷ ರೂ. ವಂಚನೆ

December 24, 2025
26
ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

December 22, 2025
126
Next Post
ಪತ್ನಿ, ಮಕ್ಕಳ ಎದುರಲ್ಲೇ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಪ್ರಕರಣದ ಎಲ್ಲಾ 15 ಮಂದಿಗೆ ಗಲ್ಲು ಶಿಕ್ಷೆ

ಪತ್ನಿ, ಮಕ್ಕಳ ಎದುರಲ್ಲೇ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಪ್ರಕರಣದ ಎಲ್ಲಾ 15 ಮಂದಿಗೆ ಗಲ್ಲು ಶಿಕ್ಷೆ

Discussion about this post

Recent News

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

December 29, 2025
159
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

December 29, 2025
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d