ಬೆಂಗಳೂರು: ಬೆಂಗಳೂರಿನ ನೂತನ ಕಮಿಷನರ್ ಆಗಿ ಬಿ. ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸ್ತುತ ಕಮಿಷನರ್ ಆಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ವರ್ಗಾವಣೆ ಮಾಡಲಾಗಿದೆ.
ಎಡಿಜಿಪಿ ಮತ್ತು ನಗರ ಟ್ರಾಫಿಕ್ ವಿಶೇಷ ಆಯುಕ್ತರಾಗಿದ್ದ ಡಾ.ಎಂ.ಎ ಸಲೀಂ ಅವರನ್ನು ಬೆಂಗಳೂರು ಅಪರಾಧ ತನಿಖೆ ವಿಭಾಗ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧ ವಿಭಾಗದ ಡಿಜಿಯಾಗಿ ವರ್ಗಾವಣೆ ಮಾಡಿ ನೇಮಿಸಲಾಗಿದೆ.
ಬೆಂಗಳೂರು ಅಪರಾಧ ತನಿಖೆ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ ಶರತ್ ಚಂದ್ರ ಅವರನ್ನು ಇಂಟಲಿಜೆನ್ಸ್ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Discussion about this post