• About us
  • Contact us
  • Disclaimer
Saturday, August 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

Coastal Times by Coastal Times
May 30, 2025
in ಕ್ರೈಮ್ ನ್ಯೂಸ್
‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ
133
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 30: ‘ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ. ನಾವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಾವು ಈಗಲೇ ದೆಹಲಿ ತಲುಪಿಯಾಗಿದೆ’. ಹೀಗೆಂದು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಮಂಗಳೂರಿನ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ವಿದೇಶಿ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ. ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ವಾಟ್ಸ್​ಆ್ಯಪ್ ಮೂಲಕ ಉರ್ದು ಬಾಷೆಯಲ್ಲಿ ಆಡಿಯೋ ಮೆಸೇಜ್ ಬಂದಿದೆ.

ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಬಂದ ಸಂದೇಶ: ‘ಹಲವು ಹಿಂದೂ ಮುಖಂಡರ ಪಟ್ಟಿ ಸಿದ್ಧ ಮಾಡಿದ್ದೇವೆ. ನಿನ್ನ (ನರಸಿಂಹ ಮಾಣಿ) ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ. ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಪಟ್ಟಿಯಲ್ಲಿದ್ದ. ಆದರೆ, ಯಾರೋ ಒಳ್ಳೆಯ ಜನ ಅವನನ್ನು‌ ಕೊಂದು‌ಹಾಕಿದ್ದಾರೆ. ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ. ಮೊದಲು ಆತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು‌ ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ’ ಎಂದು ಉಗ್ರರ ಹೆಸರಿನಲ್ಲಿ ಬಂದ ಸಂದೇಶದಲ್ಲಿದೆ.

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’: ‘ನಿನ್ನನ್ನು (ನರಸಿಂಹ ಮಾಣಿ) ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗೆ ಕೂಡ ಗೊತ್ತಿಲ್ಲ. ನಿನ್ನನ್ನು ಕೊಲೆ ಮಾಡಿದ ರೀತಿಯನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ. ಮುಸ್ಲಿಮರಿಗೆ ತೊಂದರೆ ಕೊಡುವುದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು. ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಮುಗಿಸಲಾಗುವುದು. ಇದು ಮುಜಾಹಿದೀನ್ ಸಂದೇಶ’ ಎಂದು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಬಂದ ಸಂದೇಶದಲ್ಲಿ ಹೇಳಲಾಗಿದೆ.

ವಿದೇಶಿ ಸಂಖ್ಯಗಳಿಂದ ಸಂದೇಶ: ಬೆದರಿಕೆ ಸಂದೇಶ ಪಾಕಿಸ್ತಾನ, ಅಫ್ಘಾನಿಸ್ತಾನ, ಸೌದಿ ಅರೇಬಿಯಾ ಮೊಬೈಲ್ ಸಂಖ್ಯೆಯಿಂದ ಬಂದಿದೆ. ಬೆದರಿಕೆ ಸಂದೇಶದ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ದೂರು ದಾಖಲಿಸಲಾಗಿದೆ. ‘ಮುಸ್ಲಿಮ್ ಸಹೋದರನ ಕೊಲೆಯಲ್ಲಿ ಶಾಮೀಲಾಗಿರುವ ರಾಕೇಶ್ ಬುಡೋಳಿ, ನಿಮ್ಮ ಸಹಚರ ನರಸಿಂಹ ಮಾಣಿ ಹಾಗೂ ಇತರ ಎಲ್ಲ ಹೆಸರುಗಳು ನಮ್ಮ ಪಟ್ಟಿಗೆ ಸೇರಿಸಲಾಗಿದೆ. ನಾವು ದೂರವಿಲ್ಲ ನಾವು ನಿಮ್ಮ ಮನೆ ತಲುಪಿದ್ದೇವೆ. ಈಗ ನರಸಿಂಹನ ಕ್ಷಣಗಣನೆ ಆರಂಭವಾಗಿದೆ. ಸತ್ತ ಸುಹಾಶ್ ಶೆಟ್ಟಿ ಅವನಂತೆ ನಿಮ್ಮಿಬ್ಬರನ್ನು ನಾವು ಕೊಲ್ಲುತ್ತೇವೆ. ಜೈಶ್-ಎ-ಮೊಹಮ್ಮದ್‌ನ ಮುಜಾಹಿದ್ದೀನ್​ಗಳಾದ ನಾವು ನವದೆಹಲಿಯನ್ನು ತಲುಪಿದ್ದೇವೆ. ನಾವು ದೆಹಲಿಯಲ್ಲಿದ್ದೇವೆ ಎಂದು ಹೇಳಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯನ್ನು ಒಡ್ಡಿರುತ್ತಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಭಾರೀ ಮಳೆ ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ

Next Post

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

Related Posts

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ
ಕ್ರೈಮ್ ನ್ಯೂಸ್

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
39
13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
ಕ್ರೈಮ್ ನ್ಯೂಸ್

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
55
Next Post
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

Discussion about this post

Recent News

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
25
ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d