• About us
  • Contact us
  • Disclaimer
Saturday, September 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಉದ್ಘಾಟನೆ

Coastal Times by Coastal Times
August 30, 2021
in ತಾಜಾ ಸುದ್ದಿ, ರಾಜ್ಯ
ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಉದ್ಘಾಟನೆ
23
VIEWS
WhatsappTelegramShare on FacebookShare on Twitter

ಮಂಗಳೂರು: ‘ಶಿಕ್ಷಣಕ್ಕೆ ಆದ್ಯತೆ ನೀಡಿದರೆ ಎಲ್ಲ ಸಮಸ್ಯೆ ನಿವಾರಣೆ ಆಗಲಿದೆ. ‌ಅದಕ್ಕಾಗಿ ಸಮಗ್ರವಾಗಿರುವ ಹೊಸ ಶಿಕ್ಷಣ ನೀತಿಯು ಬದಲಾದ ಸಮಯಕ್ಕೆ ಸೂಕ್ತವಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎ‌ನ್. ಆಶ್ವತ್ಥ ನಾರಾಯಣ ಹೇಳಿದರು.
ಉನ್ನತ ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಜಂಟಿಯಾಗಿ ಮಂಗಳೂರಿನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು‌ ಮಾತನಾಡಿದರು.

ಶಿಕ್ಷಣಕ್ಕೆ ಕೊಡಬೇಕಾದ ಆದ್ಯತೆ‌ ಸಿಗದೇ ಇರುವುದರಿಂದ ಜಾಗತಿಕವಾಗಿ ನಾವು ಹಿಂದುಳಿಯುವಂತಾಗಿದೆ. ಸೂಕ್ತಕಾಲದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳದೇ ಇರುವುದರಿಂದ ಸಮಾಜಕ್ಕೆ ನಷ್ಟವಾಗಿದೆ ಎಂದರು.

34 ವರ್ಷಗಳ‌ ನಂತರ ಹೊಸ ಶಿಕ್ಷಣ ನೀತಿ ಜಾರಿಯಾಗುತ್ತಿದೆ. 3 ಲಕ್ಷಕ್ಕಿಂತ ಹೆಚ್ಚು ಸಲಹೆ ಸ್ವೀಕರಿಸಿ, ಈ ನೀತಿಯನ್ನು ಜಾರಿಗೊಳಿಸಲಾಗಿದೆ. ಒಂದು ‌ವರ್ಷದ ನಂತರ ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಶಿಕ್ಷಣ ನೀತಿ ಅನುಷ್ಠಾನಕ್ಕೆ ಡಿಸೆಂಬರ್ ನಲ್ಲಿ ಸಚಿವ ಸಂಪುಟದ ಒಪ್ಪಿಗೆ ನೀಡಲಾಯಿತು. ಅನುಷ್ಠಾನ, ಜಾಗೃತಿ, ಸಹಾಯವಾಣಿ ಸೇರಿದಂತೆ ಅಗತ್ಯ ಸಹಕಾರವನ್ನು‌ ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಹೇಳಿದರು.

10 ಸಾವಿರ ಪ್ರಾಧ್ಯಾಪಕರಿಗೆ ವರ್ಷದಲ್ಲಿ ತರಬೇತಿ‌ ನೀಡಲಾಗುತ್ತಿದೆ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಕಲಿಕೆ, ಮೌಲ್ಯಮಾಪನ, ಪಠ್ಯಕ್ರಮ ಬಹಳಷ್ಟು ಸುಧಾರಣೆ ಆಗಬೇಕು.‌ ಸಮಾಜದ ಸಂಪನ್ಮೂಲವನ್ನು ಇದಕ್ಕೆ ವಿನಿಯೋಗಿಸಬೇಕು. ಅಂದಾಗ 10 ಪಟ್ಟು ಸಮಾಜಕ್ಕೆ ತಿರುಗಿ ಬರುತ್ತದೆ ಎಂದರು.

ಮಕ್ಕಳನ್ನು ಆಟದ ಮೈದಾನದಲ್ಲಿ ನೋಡಲು ಸಿಗುತ್ತಿಲ್ಲ. ಸಾಮಾಜಿಕ ಹಾಗೂ ಮಾನಸಿಕ, ದೈಹಿಕ ಸಾಮರ್ಥ್ಯ ಇರುವುದಿಲ್ಲ. ಪರಿಪೂರ್ಣ ವ್ಯಕ್ತಿತ್ವ‌ಇಲ್ಲದ ವ್ಯಕ್ತಿಗಳನ್ನು ಬೆಳೆಸುವುದರಿಂದ ಏನೂ ಸಾಧನೆ ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಸೆಮಿಸ್ಟರ್ ನಲ್ಲಿ ಮಾತ್ರ ಮೌಲ್ಯಮಾಪನ ನಡೆಯುತ್ತಿತ್ತು. ಈಗ ಪ್ರತಿ ತರಗತಿಯಲ್ಲೂ, ಪ್ರತಿ ವಿದ್ಯಾರ್ಥಿಯ ಮೌಲ್ಯಮಾಪನ ಮಾಡುವ ಮೂಲಕ ಜಾಗತಿಕ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿ‌ ಕೇಂದ್ರಿತ ಹೊಸ ಶಿಕ್ಷಣ ನೀತಿಯ ಮೂಲಕ‌ ಶೈಕ್ಷಣಿಕ, ಆಡಳಿತದಲ್ಲಿ ಸುಧಾರಣೆ ಆಗಲಿದೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ‘ತಪೋವನ’ ಆರೋಗ್ಯ ಕೇಂದ್ರ ಉದ್ಘಾಟಿಸಿ -ಸಚಿವ ಎಸ್. ಅಂಗಾರ

Next Post

20 ಮಹಡಿಗಳ ಗಗನಚುಂಬಿ ಕಟ್ಟಡ ಉರಿಯುತ್ತಿದೆ ನೋಡಿ… ವೈರಲ್ ವಿಡಿಯೊ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
20 ಮಹಡಿಗಳ ಗಗನಚುಂಬಿ ಕಟ್ಟಡ ಉರಿಯುತ್ತಿದೆ ನೋಡಿ… ವೈರಲ್ ವಿಡಿಯೊ

20 ಮಹಡಿಗಳ ಗಗನಚುಂಬಿ ಕಟ್ಟಡ ಉರಿಯುತ್ತಿದೆ ನೋಡಿ... ವೈರಲ್ ವಿಡಿಯೊ

Discussion about this post

Recent News

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
30
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d