• About us
  • Contact us
  • Disclaimer
Wednesday, July 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಮಹಾನಗರ ಪಾಲಿಕೆಗೆ ‘ತ್ಯಾಜ್ಯ’ ಭಾರ-ಪಾಲಿಕೆ ಸದಸ್ಯ ಎ.ಸಿ. ವಿನಯ್‌ರಾಜ್

Coastal Times by Coastal Times
August 30, 2021
in ತಾಜಾ ಸುದ್ದಿ, ರಾಜ್ಯ
ಮಂಗಳೂರು ಮಹಾನಗರ ಪಾಲಿಕೆಗೆ ‘ತ್ಯಾಜ್ಯ’ ಭಾರ-ಪಾಲಿಕೆ ಸದಸ್ಯ ಎ.ಸಿ. ವಿನಯ್‌ರಾಜ್
25
VIEWS
WhatsappTelegramShare on FacebookShare on Twitter

ಮಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತ್ಯಾಜ್ಯ ಉತ್ಪತ್ತಿ, ಅವುಗಳ ವೈಜ್ಞಾನಿಕ ವಿಂಗಡಣೆ ಮಹಾನಗರ ಪಾಲಿಕೆಗೆ ಸವಾಲಾಗಿದೆ. ತ್ಯಾಜ್ಯ ವಿಂಗಡಣೆಯಲ್ಲಿ ಶೇ 70ರಷ್ಟು ಸಾಧನೆ ಮಾಡಿರುವುದಾಗಿ ಪಾಲಿಕೆ ಹೇಳಿಕೊಂಡರೂ, ರಸ್ತೆ ಬದಿಯಲ್ಲಿ ಎಸೆಯುವ ಕಸ, ಅಪಾರ್ಟ್‌ಮೆಂಟ್, ವಾಣಿಜ್ಯ ಸಂಕೀರ್ಣಗಳಲ್ಲಿ ಉತ್ಪತ್ತಿಯಾಗುವ ಮಿಶ್ರ ಕಸಗಳ ವಿಲೇವಾರಿ ತಲೆನೋವಾಗಿ ಪರಿಣಮಿಸಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಂದ ಪ್ರತಿದಿನ ಸರಾಸರಿ 330 ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಸಮೀಪದ ಉಳ್ಳಾಲ ನಗರಸಭೆಯ 31 ವಾರ್ಡ್‌ಗಳು, ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿ ಉತ್ಪತ್ತಿಯಾಗುವ 50 ಟನ್‌ ಸೇರಿ ಪ್ರತಿದಿನ ಒಟ್ಟು 380 ಟನ್ ತ್ಯಾಜ್ಯ ಪಚ್ಚನಾಡಿಯ ತ್ಯಾಜ್ಯ ಘಟಕದ ಒಡಲು ಸೇರುತ್ತಿದೆ.

2019ರಲ್ಲಿ ಸುರಿದ ಭಾರಿ ಮಳೆಗೆ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಗುಡ್ಡೆ ಹಾಕಿದ್ದ ಕಸದ ಗುಡ್ಡ ಕುಸಿದು, ಎರಡು ಕಿ.ಮೀ ದೂರದವರೆಗೆ ಕೊಚ್ಚಿಕೊಂಡು ಹೋಗಿತ್ತು. ಕೃಷಿಭೂಮಿ, ಮನೆಗಳಿಗೆ ಹಾನಿಯಾಗಿತ್ತು. ಈ ದುರಂತದ ನಂತರ ಎಚ್ಚೆತ್ತುಕೊಂಡಿರುವ ಮಹಾನಗರ ಪಾಲಿಕೆ, ಕಸದ ವೈಜ್ಞಾನಿಕ ವಿಲೇವಾರಿ ಮಾಡುವ ನಿಟ್ಟಿನಲ್ಲಿ, ಪ್ರತಿ ಮನೆಯಿಂದ ಕಸ ನೀಡುವಾಗ ಹಸಿ ಕಸ, ಒಣ ಕಸವನ್ನು ಕಡ್ಡಾಯವಾಗಿ ವಿಂಗಡಣೆ ಮಾಡಲು ನಿರ್ದೇಶನ ನೀಡಿದೆ. ನಿತ್ಯವೂ ಉತ್ಪತ್ತಿಯಾಗುವ ಕಸದಲ್ಲಿ ಶೇ 50ರಷ್ಟು ಕಸವನ್ನು ಮೂಲದಲ್ಲಿಯೇ ಬೇರ್ಪಡಿಸಿ, ಹಸಿ ಕಸದಿಂದ ಗೊಬ್ಬರ, ಇಂಧನ ಉತ್ಪಾದನೆ ಮಾಡುವುದು ಪಾಲಿಕೆಯ ಉದ್ದೇಶ. ಆದರೆ, ಇದರಲ್ಲಿ ನಿಗದಿತ ಗುರಿ ತಲುಪಲು ಪಾಲಿಕೆ ಹೆಣಗಾಡುತ್ತಿದೆ.

‘ಹಸಿ ಕಸ– ಒಣ ಕಸ ವಿಂಗಡಣೆಯಲ್ಲಿ ಸಾರ್ವಜನಿಕರ ಸಹಕಾರ ಹಿಂದಿನಿಂದ ಹೆಚ್ಚು ಸಿಗುತ್ತಿದೆ. ಕಳೆದ ವಾರ 80 ಟನ್ ಮಿಶ್ರ ತ್ಯಾಜ್ಯ ಸಂಸ್ಕರಣೆ ಮಾಡಲಾಗಿದೆ. ಈವರೆಗೆ ತ್ಯಾಜ್ಯ ವಿಂಗಡಣೆಯಲ್ಲಿ ಶೇ 70ರಷ್ಟು ಸಾಧನೆ ಸಾಧ್ಯವಾಗಿದೆ. ಕೆಲವು ಕಡೆಗಳಲ್ಲಿ ಈಗಲೂ ಮನೆಯ ಹಂತದಲ್ಲಿ ವಿಂಗಡಣೆ ಸಮರ್ಪಕವಾಗಿ ಆಗುತ್ತಿಲ್ಲ. ಇದನ್ನು ಸರಿಪಡಿಸಲಾಗುವುದು’ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರತಿಕ್ರಿಯಿಸಿದರು.

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ತ್ಯಾಜ್ಯ ಸಂಸ್ಕರಣೆಗೆ ಪಾಲಿಕೆ ರೂಪಿಸಿರುವ ₹12.56 ಕೋಟಿ ವೆಚ್ಚದ ‘ಮೆಗಾ ಪ್ಲಾನ್‌‌’ ಅನುಷ್ಠಾನಗೊಳ್ಳಲಿದೆ. ಎರಡು ಹೊಸ ಯಂತ್ರಗಳ ಮೂಲಕ ತ್ಯಾಜ್ಯ ಸಂಸ್ಕರಣಾ ಸಾಮರ್ಥ್ಯವನ್ನು 425 ಟನ್‌ಗೆ ಹೆಚ್ಚಿಸುವುದು ಪಾಲಿಕೆಯ ಉದ್ದೇಶ. ಉರ್ವಸ್ಟೋರ್‌ನಲ್ಲಿರುವ ಎರಡು ಟನ್ ಸಾಮರ್ಥ್ಯದ ಬಯೊಗ್ಯಾಸ್ ಘಟಕದಲ್ಲಿ ಪ್ರತಿನಿತ್ಯ 200 ಯುನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ತಿಳಿಸಿದರು.
ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಗ್ರಹವಾಗಿರುವ ಸುಮಾರು 9 ಸಾವಿರ ಟನ್ ತ್ಯಾಜ್ಯದ ವಿಲೇವಾರಿಯ ₹ 73.73 ಕೋಟಿ ಮೊತ್ತದ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನಾ ವರದಿಯನ್ನು ಮಹಾನಗರ ಪಾಲಿಕೆ ಸರ್ಕಾರಕ್ಕೆ ಸಲ್ಲಿಸಿತ್ತು.

‘ಜೈವಿಕ ಗಣಿಗಾರಿಕೆ ಮಾದರಿಯಲ್ಲಿ ತ್ಯಾಜ್ಯವನ್ನು ಸಂಸ್ಕರಿಸಲಾಗುವುದು. ಇದರಲ್ಲಿ ದೊರೆತ ಜೈವಿಕ ತ್ಯಾಜ್ಯದಿಂದ ಗೊಬ್ಬರ ಹಾಗೂ ಇತರ ತ್ಯಾಜ್ಯವನ್ನು ಮರುಬಳಕೆಗೆ ವಿನಿಯೋಗಿಸುವ ಬಗ್ಗೆ ಯೋಚಿಸಲಾಗಿದೆ’ ಎಂದು ಅಕ್ಷಯ್‌ ಶ್ರೀಧರ್ ತಿಳಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುತ್ತಿರುವ ಆ್ಯಂಟನಿ ಸಾಲಿಡ್ ವೇಸ್ಟ್ ಮ್ಯಾನೇಜ್‌ಮೆಂಟ್ ಕಂಪನಿಯ ಗುತ್ತಿಗೆ 2022ರ ಜನವರಿಗೆ ಮುಕ್ತಾಯವಾಗುತ್ತದೆ. ಆಟೊ ಟಿಪ್ಪರ್, ಮಾನವ ಶಕ್ತಿ, ಗೊಬ್ಬರ ಉತ್ಪಾದಕ ಯಂತ್ರ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ. ಆಟೊ ಟಿಪ್ಪರ್ ಸಂಖ್ಯೆ ಕೂಡ ಕಡಿಮೆ ಇದೆ. ಕಂಪನಿ ಗುತ್ತಿಗೆ ಅವಧಿ ಪೂರ್ಣಗೊಂಡ ನಂತರ ಮುಂದಿನ ವ್ಯವಸ್ಥೆ ಬಗ್ಗೆ ಪಾಲಿಕೆ ಇನ್ನೂ ಯೋಜನೆ ರೂಪಿಸಿಲ್ಲ’ ಎಂದು ಪಾಲಿಕೆ ಸದಸ್ಯ ಎ.ಸಿ.ವಿನಯ್‌ರಾಜ್ ಆರೋಪಿಸಿದರು.

ಪ್ರತಿದಿನ ಸಂಗ್ರಹವಾಗುವ ಕಸವನ್ನು ವಿಲೇವಾರಿ ಘಟಕದಲ್ಲಿ ರಾಶಿ ಹಾಕಲಾಗುತ್ತಿದೆ. ಗೊಬ್ಬರ ಉತ್ಪಾದನೆ ಆಗುತ್ತಿಲ್ಲ. ತ್ಯಾಜ್ಯದ ಗುಡ್ಡವನ್ನು ನಾವು ಸೃಷ್ಟಿಸುತ್ತಿದ್ದೇವೆ. ಬೇಸಿಗೆಯಲ್ಲಿ ತ್ಯಾಜ್ಯ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದೆ. ತ್ಯಾಜ್ಯ ಘಟಕದ ಹೊಲಸು ನೀರು, ಫಲ್ಗುಣಿ ನದಿಗೆ ಸೇರುತ್ತಿದೆ. 30 ಗ್ರಾಮಗಳ ಜನರು ಈ ನೀರನ್ನು ಕುಡಿಯುತ್ತಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಆಗಿಲ್ಲ. ‘ನಮಾಮಿ ಗಂಗೆ’ ಮಾದರಿಯ ಯೋಜನೆ ರೂಪಿಸಬಹುದಿತ್ತು’ ಎಂದು ಪಾಲಿಕೆ ಸದಸ್ಯ ವಿನಯ್‌ರಾಜ್ ಸಲಹೆ ಮಾಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಕಾಂಕ್ರೀಟ್ ತ್ಯಾಜ್ಯಗಳನ್ನು ವಾಮಂಜೂರಿನ ಸಮತಟ್ಟು ನೆಲದಲ್ಲಿ ರಾಶಿ ಹಾಕಲಾಗುತ್ತಿದೆ. ಇನ್ನೊಂದು ಕಾಂಕ್ರೀಟ್ ಗುಡ್ಡ ಅಲ್ಲಿ ಸೃಷ್ಟಿಯಾಗುತ್ತಿದೆ ಎಂದು ಆರೋಪಿಸಿದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ, ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ

Next Post

ಉಡುಪಿ ಡೀಸಿ ಜಗದೀಶ್ ಸಿಎಂ ಜಂಟಿ ಕಾರ್ಯದರ್ಶಿಯಾಗಿ ನೇಮಕ- ಉಡುಪಿಗೆ ಕೂರ್ಮ ಎಂ. ರಾವ್ ಹೊಸ ಜಿಲ್ಲಾಧಿಕಾರಿ

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ಉಡುಪಿ ಡೀಸಿ ಜಗದೀಶ್ ಸಿಎಂ ಜಂಟಿ ಕಾರ್ಯದರ್ಶಿಯಾಗಿ ನೇಮಕ- ಉಡುಪಿಗೆ ಕೂರ್ಮ ಎಂ. ರಾವ್ ಹೊಸ ಜಿಲ್ಲಾಧಿಕಾರಿ

ಉಡುಪಿ ಡೀಸಿ ಜಗದೀಶ್ ಸಿಎಂ ಜಂಟಿ ಕಾರ್ಯದರ್ಶಿಯಾಗಿ ನೇಮಕ- ಉಡುಪಿಗೆ ಕೂರ್ಮ ಎಂ. ರಾವ್ ಹೊಸ ಜಿಲ್ಲಾಧಿಕಾರಿ

Discussion about this post

Recent News

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
131
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d