• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ನಗರಸಭೆ ಎರಡನೇ ಅವಧಿಗೆ ಅಧ್ಯಕ್ಷೆಯಾಗಿ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನಾ ಹರೀಶ್ ಆಯ್ಕೆ

Coastal Times by Coastal Times
August 30, 2024
in ಕರಾವಳಿ, ರಾಜಕೀಯ
ಉಳ್ಳಾಲ ನಗರಸಭೆ ಎರಡನೇ ಅವಧಿಗೆ ಅಧ್ಯಕ್ಷೆಯಾಗಿ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನಾ ಹರೀಶ್ ಆಯ್ಕೆ
23
VIEWS
WhatsappTelegramShare on FacebookShare on Twitter

ಉಳ್ಳಾಲ: ನಗರಸಭೆಯ ಅಧ್ಯಕ್ಷೆಯಾಗಿ ಕಾಂಗ್ರೆಸ್ಸಿನ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನ ಹರೀಶ್ ಆಯ್ಕೆಯಾಗಿದ್ದಾರೆ. ಉಳ್ಳಾಲ ನಗರ ಸಭೆಯ ಎರಡನೇ ಆಡಳಿತಾವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಗರಸಭೆಯ ಸಭಾಂಗಣದಲ್ಲಿ ಸದಸ್ಯರು ಅಭ್ಯರ್ಥಿಗಳ ಪರ ಕೈ ಎತ್ತುವ ಮೂಲಕ ಚುನಾವಣೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ನ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನಾ ಹರೀಶ್ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಎ)ದ ಮಹಿಳೆಗೆ ಮೀಸಲಿರಿಸಲಾಗಿತ್ತು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಶಶಿಕಲಾ, ಬಿಜೆಪಿಯಿಂದ ಭವಾನಿ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಸಪ್ನ ಹರೀಶ್, ಬಿಜೆಪಿಯಿಂದ ನಮಿತ ಗಟ್ಟಿ, ಎಸ್ ಡಿಪಿಐ ಯಿಂದ ಝರೀನ ರವೂಫ್ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಶಶಿಕಲಾ ಪರ 23 ಮತಗಳು, ಬಿಜೆಪಿಯ ಭವಾನಿ ಪರ 6 ಮತಗಳು ಚಲಾವಣೆ ಆಗಿದ್ದು, ಇಬ್ಬರು ನಗರ ಸಭೆ ಸದಸ್ಯರಾದ ಬಶೀರ್ ಹಾಗೂ ದಿನಕರ್ ಉಳ್ಳಾಲ ಮತ ಚಲಾಯಿಸದೆ ತಟಸ್ಥರಾದರು, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಸಪ್ನಾ ಹರೀಶ್ ಪರ 17 ಮತಗಳು, ಎಸ್ ಡಿಪಿಐ ಯ ಝರೀನ ರವೂಫ್ ಪರ 6 ,ಬಿಜೆಪಿಯ ನಮಿತ ಗಟ್ಟಿಯ ಪರ 6 ಮತಗಳು ಚಲಾವಣೆ ಆದವು. ಇಬ್ಬರು ನಗರ ಸಭೆ ಸದಸ್ಯರು ತಟಸ್ಥರಾದರು.

23 ಮತ ಪಡೆದ ಶಶಿಕಲಾ ಅಧ್ಯಕ್ಷರಾಗಿ,17 ಮತಗಳನ್ನು ಪಡೆದ ಕಾಂಗ್ರೆಸ್ ನ ಸಪ್ನ ಹರೀಶ್ ಉಪಾಧ್ಯಕ್ಷೆಯಾಗಿ ಆಯ್ಕೆ ಆದರು. ಸಹಾಯಕ ಆಯುಕ್ತ ಹರ್ಷವರ್ಧನ್ ಚುನಾವಣೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಉಳ್ಳಾಲ ನಗರ ಸಭೆಯ ಒಟ್ಟು 31 ಸ್ಥಾನ ಗಳ ಪೈಕಿ ಕಾಂಗ್ರೆಸ್ 13, ಬಿಜೆಪಿ 6, ಜೆಡಿಎಸ್ 4, ಎಸ್ ಡಿಪಿಐ 6 ಹಾಗೂ ಇಬ್ಬರು ಪಕ್ಷೇತರರು ಸ್ಥಾನ ಪಡೆದಿದ್ದಾರೆ. ಈ ಪೈಕಿ ಜೆಡಿಎಸ್ ನ ನಾಲ್ವರು ಸದಸ್ಯರ ಪೈಕಿ ಮೂವರು ಜೆಡಿಎಸ್ ಗೆ ರಾಜೀನಾಮೆ ನೀಡಿದ್ದು, ಇವರಲ್ಲಿ ಇಬ್ಬರು ಕಾಂಗ್ರೆಸ್ ಗೆ ಸೇರಿದ್ದರು. ಉಳ್ಳಾಲ ನಗರ ಸಭೆಯ ಕಾಂಗ್ರೆಸ್ ಆಡಳಿತದ ಮೊದಲ ಹಂತದ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರಾವಧಿ ,2023 ಮೇ ತಿಂಗಳಲ್ಲಿ ಕೊನೆಗೊಂಡಿತ್ತು.

ಕೈ ಪಕ್ಷಕ್ಕೆ ಮತ ಚಲಾಯಿಸಿದ ಎಸ್ಡಿಪಿಐ ಸದಸ್ಯರು: ನಗರಸಭೆಯ ಅಧ್ಯಕ್ಷ ಗಾದಿಗೆ ಸ್ಫರ್ಧಿಸಿದ್ದ ಶಶಿಕಲಾ ಗೆಲ್ಲಲು ಬೇಕಾದ ಸಂಖ್ಯಾ ಬಲ ಇದ್ದರೂ, ಎಸ್ಡಿಪಿಐ ನ ಆರು ನಗರ ಸದಸ್ಯರು ಕೈ ಎತ್ತಿ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಎಸ್ಡಿಪಿಐನ ಝರೀನ ರವೂಫ್ ಸ್ಫರ್ಧಿಸಿದ್ದರು. ನಗರಸಭೆ ಮೊದಲ ಅವಧಿಯಲ್ಲಿ ಎಸ್ಡಿಪಿಐನ ಝರೀನ ರವೂಫ್ ಕೈ ಪಕ್ಷದ ಕೌನ್ಸಿಲರ್ಗಳ ಬೆಂಬಲದಿಂದ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪ; ಮೂವರ ಬಂಧನ

Next Post

ಪುತ್ತೂರು: ಅನುಮಾನಾಸ್ಪದ ಚಟುವಟಿಕೆಯ ಆರೋಪ: ಇಬ್ಬರು ಮಹಿಳೆಯರು ವಶಕ್ಕೆ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಪುತ್ತೂರು: ಅನುಮಾನಾಸ್ಪದ ಚಟುವಟಿಕೆಯ ಆರೋಪ: ಇಬ್ಬರು ಮಹಿಳೆಯರು ವಶಕ್ಕೆ

ಪುತ್ತೂರು: ಅನುಮಾನಾಸ್ಪದ ಚಟುವಟಿಕೆಯ ಆರೋಪ: ಇಬ್ಬರು ಮಹಿಳೆಯರು ವಶಕ್ಕೆ

Discussion about this post

Recent News

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
60
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d