ಸುರತ್ಕಲ್: ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊಸಬೆಟ್ಟು ಎಚ್.ಪಿ. ಪೆಟ್ರೋಲ್ ಬಂಕ್ ಬಳಿ ಶನಿವಾರ ಮುಂಜಾನೆ 3:30ರ ಸುಮಾರಿಗೆ ನಡೆದಿದೆ.
ಮೃತಪಟ್ಟವರನ್ನು ತಮಿಳುನಾಡು ಮೂಲದ ಅರ್ಜುನ್ ಎಂದು ಗುರುತಿಸಲಾಗಿದೆ. ಅರ್ಜುನ್ ಅವರು ಶನಿವಾರ ಬೆಳಗ್ಗಿನ ಜಾವ ಮಂಗಳೂರು ಕಡೆಯಿಂದ ಸುರತ್ಕಲ್ ಕಡೆಗೆ ತಮಿಳುನಾಡು ರಿಜಿಸ್ಟ್ರೇಶನ್ (TN82 Y -1234) ಹೊಂದಿರುವ ಫಾರ್ಚುನರ್ ಕಾರಿನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಹೊಸಬೆಟ್ಟು ಎಚ್.ಪಿ. ಪೆಟ್ರೋಲ್ ಬಂಕ್ ನ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಈಚರ್ ಟಿಪ್ಪರ್ ಲಾರಿಗೆ ಕಾರು ಢಿಕ್ಕಿ ಹೊಡೆಯಿತೆನ್ನಲಾಗಿದೆ.
ಫಾರ್ಚುನರ್ ಕಾರಿನ ಚಾಲಕ ಅರ್ಜುನ್ ಎಂದು ತಿಳಿದು ಬಂದಿದ್ದು, ಇವರ ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅರ್ಜುನ್ ಎಂಬವರು ಮಂಗಳೂರಿನಿಂದ ಸುರತ್ಕಲ್ ಹೋಗುತ್ತಿದ್ದ ಸಂದರ್ಭ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಈಚರ್ ಟಿಪ್ಪರ್ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲಿದ್ದ ಸಹ ಪ್ರಯಾಣಿಕ ಮೊಹಮ್ಮದ್ ಫಿಜಾನ್ ಅವರಿಗೆ ತಲೆಯ ಒಳಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಇತರ ಸಹ ಪ್ರಯಾಣಿಕ ಅನಿರಿಧ್ ನಾಯರ್ ಅವರ ಹಣೆ ಮೇಲೆ ಸಣ್ಣ ಒತ್ತಡದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ
Discover more from Coastal Times Kannada
Subscribe to get the latest posts sent to your email.
Discussion about this post