• About us
  • Contact us
  • Disclaimer
Sunday, May 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪವರ್ ಸ್ಟಾರ್ ಪುನೀತ್‌ ಅಂತ್ಯಸಂಸ್ಕಾರ ನಾಳೆ: ಸಿಎಂ ಬಸವರಾಜ ಬೊಮ್ಮಾಯಿ

Coastal Times by Coastal Times
October 30, 2021
in ರಾಜ್ಯ, ಸಿನಿಮಾ
ಪವರ್ ಸ್ಟಾರ್ ಪುನೀತ್‌ ಅಂತ್ಯಸಂಸ್ಕಾರ ನಾಳೆ: ಸಿಎಂ ಬಸವರಾಜ ಬೊಮ್ಮಾಯಿ
12
VIEWS
WhatsappTelegramShare on FacebookShare on Twitter

ಬೆಂಗಳೂರು: ಪುನೀತ್‌ ಅವರ ಅಂತಿಮ ಸಂಸ್ಕಾರವನ್ನು ನಾಳೆ (ಭಾನುವಾರ) ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪುನೀತ್‌ ಪುತ್ರಿ ಬೆಂಗಳೂರಿಗೆ ಬರುವುದು ಸಂಜೆ 6 ಆಗಲಿದೆ. ಸಂಜೆಯ ನಂತರ ಅಂತ್ಯಕ್ರಿಯೆ ನಡೆಸುವುದು ಕಷ್ಟವಾಗಬಹುದು. ಅಲ್ಲದೇ, ಅವರ ಅಭಿಮಾನಿಗಳು ಇನ್ನೂ ಬಹಳಷ್ಟು ಸಂಖ್ಯೆಯಲ್ಲಿ ಬರುವವರಿದ್ದಾರೆ. ಹೀಗಾಗಿ ರಾಜಕುಮಾರ್‌ ಕುಟುಂಬಸ್ಥರ ಜೊತೆ ಚರ್ಚೆ ಮಾಡಿ ನಾಳೆಗೆ ಅಂತ್ಯಕ್ರಿಯೆ ನಿಗದಿ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಿರುವ ನಗರದ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರ ಇಂದು ಅವರ ಮಗಳು ಬಂದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಕುಟುಂಬದವರು ಮತ್ತು ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಇದನ್ನು ಸುಗಮವಾಗಿ ನಡೆಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಯವರು ಕ್ರಮ ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಪುನೀತ್ ರಾಜ್‌ಕುಮಾರ್ ಜನಪ್ರಿಯ ನಟ. ಅವರ ಅಗಲಿಕೆ ನಮಗೆಲ್ಲರಿಗೂ ದುಃಖ ತಂದಿದೆ. ಅವರನ್ನು ಗೌರವದಿಂದ ಶಾಂತಿಯುತವಾಗಿ ನಾವು ಬೀಳ್ಕೊಡಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಮಯ- ಈ ಸಂದರ್ಭದಲ್ಲಿ ನಾವು ಸಂಯಮ, ಜವಾಬ್ದಾರಿಯಿಂದ ವರ್ತಿಸಬೇಕಾಗಿದೆ. ಜನರು ಈ ವರೆಗೆ ಅತ್ಯುತ್ತಮವಾಗಿ ಸಹಕರಿಸಿದ್ದಾರೆ. ನಮ್ಮ ಜವಾಬ್ದಾರಿಯುತ ನಡವಳಿಕೆ ಡಾ. ರಾಜ್ ಕುಮಾರ್ ಹಾಗೂ ಪುನೀತ್ ಅವರಿಗೆ ಗೌರವ ಸಲ್ಲಿಸಿದಂತೆ. ಶಾಂತಿ, ಸ್ನೇಹದಿಂದ ಇರುವುದು ಕನ್ನಡಿಗರ ಸಂಸ್ಕೃತಿ. ಇದನ್ನು ನಾವು ಇಂದು ಮೆರೆಯಬೇಕಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಅಂತಿಮ ಯಾತ್ರೆಗೆ ಮಾರ್ಗ ನಿಗದಿ :

ಬೆಂಗಳೂರು: ಪುನೀತ್‌ ರಾಜ್‍ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆಗೆ ಮಾರ್ಗ ನಿಗದಿ‌ ಮಾಡಲಾಗಿದೆ.

ಕಂಠೀರವ ಸ್ಟುಡಿಯೊದಲ್ಲಿರುವ ಡಾ. ರಾಜ್‌ಕುಮಾರ್ ಸಮಾಧಿ ಬಳಿಯೇ ಅಂತ್ಯಕ್ರಿಯೆ ನಡೆಯಲಿದೆ. ಕಂಠೀರವ ಕ್ರೀಡಾಂಗಣದಿಂದ‌ ಪಾರ್ಥಿವ ಶರೀರದ‌ ಮೆರವಣಿಗೆ ಹೊರಡಲಿದೆ.

ಕಾರ್ಪೊರೇಷನ್ ವೃತ್ತ, ಬಸವೇಶ್ವರ ವೃತ್ತ (ಚಾಲುಕ್ಯ ವೃತ್ತ), ವಿಂಡ್ಸರ್ ಮ್ಯಾನರ್, ಸ್ಯಾಂಕಿ ಕೆರೆ, ಸರ್ಕಲ್ ಮಾರಮ್ಮ ದೇವಸ್ಥಾನ, ಯಶವಂತಪುರ, ಗೊರಗುಂಟೆಪಾಳ್ಯದ ಮೂಲಕ ಮೆರವಣಿಗೆ ಹೋಗಲಿದೆ.

ಮೆರವಣಿಗೆಯುದ್ದಕ್ಕೂ ಪೊಲೀಸರು ಬಿಗಿ‌ ಭದ್ರತೆ ಕೈಗೊಳ್ಳಲಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಉರ್ವ ಮಾರ್ಕೆಟ್‌ ಬಳಿ ಒಳಾಂಗಣ ಕ್ರೀಡಾಂಗಣಕ್ಕೆ ಚಾಲನೆ

Next Post

ಬಿಟ್‌ ಕಾಯಿನ್ ಹಗರಣ: ಸರ್ಕಾರಿ ಜಾಲತಾಣದಿಂದ ₹46 ಕೋಟಿ ದೋಚಿದ್ದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ!

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
22
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
51
Next Post
ಬಿಟ್‌ ಕಾಯಿನ್ ಹಗರಣ: ಸರ್ಕಾರಿ ಜಾಲತಾಣದಿಂದ ₹46 ಕೋಟಿ ದೋಚಿದ್ದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ!

ಬಿಟ್‌ ಕಾಯಿನ್ ಹಗರಣ: ಸರ್ಕಾರಿ ಜಾಲತಾಣದಿಂದ ₹46 ಕೋಟಿ ದೋಚಿದ್ದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ!

Discussion about this post

Recent News

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
76
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d