ಚಿಕ್ಕಮಗಳೂರು, ಅ.30: ಮೂಡಿಗೆರೆ ತಾಲೂಕಿನ ಬೆಥನಿ ಪ್ರೌಢಶಾಲಾ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮೂಡಿಗೆರೆ ಪಟ್ಟಣದಲ್ಲಿ ಶನಿವಾರ ಮುಸ್ಸಂಜೆ ವೇಳೆ ನಡೆದಿದೆ.
ಮೂಲತಃ ಮಹಾರಾಷ್ಟ್ರದ, ಪ್ರಸಕ್ತ ಮೂಡಿಗೆರೆ ಪಟ್ಟಣದಲ್ಲಿ ಆಭರಣ ದುರಸ್ತಿ ಅಂಗಡಿ ನಡೆಸುತ್ತಿದ್ದ ಸಂತೋಷ್ ಎಂಬವರ ಪುತ್ರಿ ವೈಷ್ಣವಿ(14) ಮೃತ ಬಾಲಕಿ. ಅಗಲುವಿಕೆಯ ನೋವಿನ ಮಧ್ಯೆಯೂ ಪೋಷಕರು ವೈಷ್ಣವಿಯ ನೇತ್ರದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ವೈಷ್ಣವಿ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹೆತ್ತವರು ಆಕೆಯ ನೇತ್ರ ದಾನ ಮಾಡಲು ನಿರ್ಧರಿಸಿದ್ದು, ಅದರಂತೆ ಆಸ್ಪತ್ರೆ ವೈದ್ಯರು ನೇತ್ರದಾನ ಪ್ರಕ್ರಿಯೆ ನೆರವೇರಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post