ಮಂಗಳೂರು, ಜ.30 : ಮನೆಯಲ್ಲಿ ಮೊಬೈಲ್ ಬಳಕೆ ಮಾಡುವುದಕ್ಕೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದಕ್ಕೆ 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ.
ನಗರದ ಪದವು ಬಿ. ಗ್ರಾಮದ ಕೋಟಿಮುರದ ನಿವಾಸಿ ಜಗದೀಶ್ ಎಂಬವರ ಪುತ್ರ, 9ನೇ ತರಗತಿಯ ವಿದ್ಯಾರ್ಥಿ ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಗುರುತಿಸಲಾಗಿದೆ.
ಜ್ಞಾನೇಶ್ ವಿಪರೀತವಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಬಗ್ಗೆ ಈತನ ತಾಯಿ ಗದರಿಸಿದ್ದರು. ಇದರಿಂದ ಬೇಸರಗೊಂಡ ಬಾಲಕ ಸ್ನಾನ ಮಾಡಿ ಬರುವುದಾಗಿ ರೂಮಿಗೆ ಹೋಗಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಬಳಿಕ ತಂದೆ ರೂಮ್ ಹೋಗಿ ನೋಡಿದಾಗ ಬಾಲಕ ನೇಣು ಬಿಗಿದಿರುವುದು ಪತ್ತೆಯಾಗಿತ್ತು. ಕೂಡಲೇ ಶಾಲನ್ನು ಕತ್ತರಿಸಿ ಇಳಿಸುವಷ್ಟರಲ್ಲಿ ಜ್ಞಾನೇಶ್ ಮೃತಪಟ್ಟಿದ್ದ. ಬಾಲಕ 9ನೇ ಕ್ಲಾಸ್ ಶಾಲೆಯಲ್ಲಿ ಓದುತ್ತಿದ್ದು ತುಂಟನಾಗಿದ್ದ. ಮೊಬೈಲ್ ಹುಚ್ಚಿನಿಂದಾಗಿ ಸಣ್ಣ ಪ್ರಾಯದಲ್ಲಿ ಪ್ರಾಣ ಬಿಡುವಂತಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post