• About us
  • Contact us
  • Disclaimer
Saturday, September 30, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ಕರಾವಳಿ

ಮುಸ್ಲಿಂ ವರ್ತಕರಿಗೆ ನಿಷೇಧ ಹಿನ್ನೆಲೆ ; ವ್ಯಾಪಾರಕ್ಕೆ ಅವಕಾಶ ನೀಡುವಂತೆ ಪೇಜಾವರ ಶ್ರೀಗಳಿಗೆ ವರ್ತಕರ ಮನವಿ

Coastal Times by Coastal Times
March 31, 2022
in ಕರಾವಳಿ
ಮುಸ್ಲಿಂ ವರ್ತಕರಿಗೆ ನಿಷೇಧ ಹಿನ್ನೆಲೆ ; ವ್ಯಾಪಾರಕ್ಕೆ ಅವಕಾಶ ನೀಡುವಂತೆ ಪೇಜಾವರ ಶ್ರೀಗಳಿಗೆ ವರ್ತಕರ ಮನವಿ
53
VIEWS
WhatsappTelegramShare on FacebookShare on Twitterinstagram

ಉಡುಪಿ, ಮಾ.30: ಹಿಂದು ದೇವಸ್ಥಾನ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಮುಸ್ಲಿಂ ವರ್ತಕರ ಒಕ್ಕೂಟದ ಸದಸ್ಯರು ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ, ಸಾಮರಸ್ಯ ನೆಲೆಸಲು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಅಬೂಬಕ್ಕರ್ ಆತ್ರಾಡಿ ನೇತೃತ್ವದಲ್ಲಿ ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಮುಸ್ಲಿಂ ವರ್ತಕರು, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿರುವುದರಿಂದ ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿದರು. ಮುಸಲ್ಮಾನ ಸಮುದಾಯ ಕೂಡ ಶಾಂತಿಯನ್ನು ಬಯಸುತ್ತದೆ. ಒಬ್ಬರು- ಇಬ್ಬರು ಮಾಡುವ ತಪ್ಪಿಗೆ ಇಡೀ ಸಮಾಜವನ್ನು ದ್ವೇಷಿಸುವುದು ಸೂಕ್ತವಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳ ಹಾಗೆ ಸಹಬಾಳ್ವೆಯಿಂದ ಬಾಳಬೇಕು. ಹಿಂದೆ ಆಗಿರುವ ಘಟನೆಗಳನ್ನು ಮರೆತು ಸಹಬಾಳ್ವೆಯಿಂದ ಬಾಳಬೇಕಾಗಿದೆ. ಒಂದು ಸಮಿತಿ ರಚನೆ ಮಾಡುವಂತೆ ಸೂಚನೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ.

ಮುಸ್ಲಿಂ ವರ್ತಕರ ಸ್ವಾಮೀಜಿ ಭೇಟಿ ಸಂದರ್ಭದಲ್ಲಿ ಕ್ರೈಸ್ತ ಧರ್ಮಗುರು ಫಾ. ಚಾಲ್ಸ್ ಅವರನ್ನೂ ಕರೆ ತರಲಾಗಿತ್ತು. ನಾವೆಲ್ಲರೂ ಮನುಷ್ಯತ್ವದ ತತ್ವದಲ್ಲಿ ಬಾಳುವವರು.‌‌ ಹೊಂದಾಣಿಕೆಯಿಂದ ನಡೆದುಕೊಂಡು ಹೋದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿ ಕೆಲವರು ತಪ್ಪುಗಳನ್ನು ಮಾಡುತ್ತಾರೆ. ಒಬ್ಬರಿಬ್ಬರು ಮಾಡಿದ ತಪ್ಪಿನಿಂದ ಹಲವರಿಗೆ ಸಮಸ್ಯೆಗಳು ಆಗುತ್ತದೆ.‌ ತಪ್ಪು-ಒಪ್ಪುಗಳನ್ನು ಸರಿ ಮಾಡಿಕೊಂಡು ಹೋದಲ್ಲಿ ಶಾಂತಿ ಸಹಬಾಳ್ವೆ ಸಾಧ್ಯ ಎಂದವರು ಹೇಳಿದರು. ಧರ್ಮ ಎಲ್ಲರಿಗೂ ಬೇಕು, ಧರ್ಮಕ್ಕಾಗಿ ಮನುಷ್ಯತ್ವವನ್ನು ಬೇರ್ಪಡಿಸುವುದು ಸರಿಯಲ್ಲ. ಎಂದು ಉಡುಪಿಯ ಶೋಕಮಾತಾ ಇಗರ್ಜಿಯ ಧರ್ಮಗುರು ಫಾ. ಚಾರ್ಲ್ಸ್ ಹೇಳಿದ್ದಾರೆ.

ಉಡುಪಿ ಶೋಕಮಾತಾ ಇಗರ್ಜಿ ಧರ್ಮಗುರು ಫಾ| ಚಾರ್ಲ್ಸ್, ಉಡುಪಿ ಧರ್ಮಗುರು ಇಮಾನುಲ್ಲಾಹ್ ಖಾನ್, ಸಾಮಾಜಿಕ ಕಾರ್ಯಕರ್ತ ಅಬ್ದುಲ್ಲಾ ನಾವುಂದ,ಅಬ್ದುಲ್ಲಾ ಪರ್ಕಳ, ಮಣಿಪಾಲ, ಉದ್ಯಮಿ ಕೆ. ಅಬೂಬಕ್ಕರ್ , ಉಡುಪಿ ಎಲೆಕ್ಟಿಕಲ್ಸ್ ಇಲೆಕ್ಟ್ರಾನಿಕ್ಸ್ ಅಧ್ಯಕ್ಷ ಬಿನೇಶ್, ಗಂಗಾಧರ, ಉದ್ಯಮಿಗಳಾದ ಮುಹಮ್ಮದ್ ಮೌಲಾ, ಅಬೂಬಕರ್ ನೇಜಾರ್, ಜಾಮಿಯಾ ಮಸೀದಿ ಕಾರ್ಯದರ್ಶಿ ವಿ.ಎಸ್. ಉಮರ್, ಬೀದಿ ಬದಿ ವ್ಯಾಪಾರ ಮತ್ತು ಜಾತ್ರಾ ವ್ಯಾಪಾರದ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆರೀಫ್ , ಬಳಕೆದಾರರ ವೇದಿಕೆಯ ಬಿ.ಎಚ್. ಶೆಟ್ಟಿಗಾರ್ ಉಪಸ್ಥಿತರಿದ್ದರು.

Related Posts

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ಕರಾವಳಿ

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

September 30, 2023
74
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”
ಕರಾವಳಿ

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

September 30, 2023
22

Recent News

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

September 30, 2023
74
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

September 30, 2023
22
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

September 30, 2023
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

September 30, 2023
ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!

ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!

September 30, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In