• About us
  • Contact us
  • Disclaimer
Friday, September 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ, ಸ್ವಉದ್ಯೋಗಕ್ಕೆ ತರಬೇತಿ ಆಫರ್

Coastal Times by Coastal Times
March 31, 2024
in ರಾಜ್ಯ
ಮಂಗಳೂರು: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ, ಸ್ವಉದ್ಯೋಗಕ್ಕೆ ತರಬೇತಿ ಆಫರ್
46
VIEWS
WhatsappTelegramShare on FacebookShare on Twitter

ಮಂಗಳೂರು: ರಾಜ್ಯದಲ್ಲಿ ಮತ್ತೆ ನಕ್ಸಲರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಿರುವ ಬೆನ್ನಲ್ಲೇ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನಕ್ಕೂ ರಾಜ್ಯ ಸರಕಾರ ಮುಂದಾಗಿದೆ.

ನಕ್ಸಲರ ಶರಣಾಗತಿ, ಪುನರ್ವಸತಿಗೆ ಸಂಬಂಧಿಸಿದ ಈ ಹಿಂದಿನ ಯೋಜನೆಗಳಿಗೆ ಹೊಸ ರೂಪ ನೀಡಲಾಗಿದ್ದು ಶರಣಾಗುವ ಓರ್ವ ನಕ್ಸಲನಿಗೆ 7.50 ಲ.ರೂ. ವರೆಗೆ ನಗದು ಪರಿಹಾರ/ಪ್ರೋತ್ಸಾಹಧನ ನೀಡಲಾಗುವುದು. ಹೆಚ್ಚು ಪರಿಣಾಮಕಾರಿ ಮತ್ತು ಪ್ರಯೋಜನಕಾರಿ ಎನಿಸುವಂತಹ ಪ್ಯಾಕೇಜ್‌ ನೀಡಲೂ ನಿರ್ಧರಿಸಲಾಗಿದೆ. ಶರಣಾಗತರಾಗುವವರಿಗೆ ನಗದು ಜತೆಗೆ ಕೌಶಲ ತರಬೇತಿ, ಇತರ ಪ್ರೋತ್ಸಾಹ ಧನ, ಪ್ರಕರಣ ವಾಪಸು ಹಾಗೂ ಪುನರ್ವಸತಿ ಮತ್ತಿತರ ಯೋಜನೆಗಳನ್ನು ಹೊಂದಲಾಗಿದೆ. 2015ರಲ್ಲಿದ್ದ ನಕ್ಸಲ್‌ ಶರಣಾಗತಿ ಯೋಜನೆಯನ್ನು ಇದೀಗ ಪರಿಷ್ಕರಿಸಿದ್ದು, ನಕ್ಸಲರು/ಎಡಪಂಥೀಯ ಭಯೋತ್ಪಾದಕರು ಶರಣಾಗತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬುದು ಸರಕಾರದ ಲೆಕ್ಕಾಚಾರ.

ಉನ್ನತೀಕರಿಸಿದ ಯೋಜನೆಯಡಿ ಶರಣಾಗುವ ನಕ್ಸಲರನ್ನು 3 ಶ್ರೇಣಿಗಳಲ್ಲಿ ವಿಭಾಗಿಸಿ “ಪ್ರವರ್ಗ ಎ’ಯವರಿಗೆ 7.5 ಲ.ರೂ., ಪ್ರವರ್ಗ “ಬಿ’ಯವರಿಗೆ 4 ಲ.ರೂ. ಮತ್ತು ಪ್ರವರ್ಗ “ಸಿ’ಯವರಿಗೆ 2 ಲ.ರೂ. ನಿಗದಿಗೊಳಿಸಲಾಗಿದೆ. ನಕ್ಸಲ್‌ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದು ಭೂಗತರಾಗಿ ಶಸ್ತ್ರಸಜ್ಜಿತ ಗುಂಪಿನ ಸದಸ್ಯರಾಗಿದ್ದು ಸೆಂಟ್ರಲ್‌ ಕಮಿಟಿ, ರೀಜನಲ್‌ ಕಮಿಟಿ, ರಾಜ್ಯ ಸಮಿತಿ, ಜಿಲ್ಲಾ ಸಮಿತಿ ಮತ್ತು ಏರಿಯಾ ಸಮಿತಿಗಳಲ್ಲಿ ಯಾವುದಾದರೂ ಒಂದು ಅಥವಾ ಹೆಚ್ಚಿನ ಕಮಿಟಿಗಳ ಸದಸ್ಯರಾಗಿ ಸಕ್ರಿಯವಾಗಿರುವ ಮತ್ತು ಅಂತವರ ವಿರುದ್ಧ ಒಂದು ಅಥವಾ ಅದಕ್ಕಿಂತ ಹೆಚ್ಚಿನ ಕ್ರಿಮಿನಲ್‌ ಮೊಕದ್ದಮೆಗಳನ್ನು ಹೊಂದಿರುವ ಸ್ಥಳೀಯ, ಅಂದರೆ ಕರ್ನಾಟಕದಲ್ಲಿ ಜನಿಸಿರುವ/ಕರ್ನಾಟಕದಲ್ಲಿ ನಿವಾಸ ಹೊಂದಿರುವವರನ್ನು ಪ್ರವರ್ಗ “ಎ’ ಎಂದು ಗುರುತಿಸಲಾಗುತ್ತದೆ.

ನಕ್ಸಲ್‌ ಸಂಘಟನೆಗಳ ಸದಸ್ಯರಾಗಿದ್ದು ಭೂಗತರಾಗಿ ಶಸ್ತ್ರಸಜ್ಜಿತ ಗುಂಪಿನ ಸದಸ್ಯರಾಗಿದ್ದು ವಿವಿಧ ಸಮಿತಿಗಳ ಪೈಕಿ ಯಾವುದಾದರೂ ಒಂದು ಸಮಿತಿಯ ಸದಸ್ಯರಾಗಿ ಸಕ್ರಿಯವಾಗಿರುವ ಮತ್ತು ಅಂತವರ ವಿರುದ್ಧ ಒಂದು ಅಥವಾ ಅದಕ್ಕಿಂತ ಹೆಚ್ಚಿನ ಕ್ರಿಮಿನಲ್‌ ಮೊಕದ್ದಮೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ನಿವಾಸ ಹೊಂದದೇ ಇರುವವರನ್ನು ಪ್ರವರ್ಗ “ಬಿ’ಯಲ್ಲಿ ಸೇರಿಸಲಾಗುತ್ತದೆ. ಎಡಪಂಥೀಯ ಭಯೋತ್ಪಾದನಾ ಸಂಘಟನೆಯ ಚಟುವಟಿಕೆಗಳನ್ನು ಬೆಂಬಲಿಸುವವರು, ಕೀಪರ್‌ ಗಳು, ಕೊರಿಯರ್‌ಗಳು, ಮಾಹಿತಿದಾರರು ಮತ್ತು ಈ ಸಂಘಟನೆಗೆ ನೇಮಕ ಮಾಡುವ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿದವರಾಗಿದ್ದು ಪ್ರವರ್ಗ 1 ಮತ್ತು 2ರ ಅಡಿಯಲ್ಲಿ ಯಾವುದೇ ಕ್ರಿಮಿನಲ್‌ ಮೊಕದ್ದಮೆಗಳಲ್ಲಿ ತಮ್ಮ ವಿರುದ್ಧ ದೋಷಾರೋಪಣೆ ಪತ್ರ ಹೊಂದಿರುವವರು ಪ್ರವರ್ಗ 3ರಲ್ಲಿ ಇರುತ್ತಾರೆ.

ನಕ್ಸಲರು ತಮ್ಮ ಶಸ್ತ್ರಗಳನ್ನು ತಂದು ಒಪ್ಪಿಸಿದಲ್ಲಿ ಅಂಥವರಿಗೆ ಪ್ರತ್ಯೇಕ ಸಂಭಾವನೆ ಸಿಗಲಿದೆ. ಅಲ್ಲದೆ, ತರಬೇತಿ ಪಡೆಯುವರಿಗೆ ತಿಂಗಳಿಗೆ 5 ಸಾವಿರದಂತೆ ಎರಡು ವರ್ಷಗಳ ಕಾಲ ನಿಶ್ಚಿತ ಮೊತ್ತ ಸಿಗಲಿದೆ. ಇದಲ್ಲದೆ, ಅವರ ವಿರುದ್ಧದ ಕೇಸುಗಳನ್ನು ಹಿಂಪಡೆಯಲಾಗುವುದು. ಅವರಿಗೆ ವಕೀಲರ ಸೌಲಭ್ಯ ಬೇಕಿದ್ದಲ್ಲಿ ಅದನ್ನೂ ಒದಗಿಸಲಾಗುವುದು. ಯೋಜನೆಯಡಿ ಈಗಾಗಲೇ ರಾಜ್ಯದಲ್ಲಿ 14 ನಕ್ಸಲರು ಸರಕಾರದ ಮುಂದೆ ಶರಣಾಗಿದ್ದು, ಮುಖ್ಯ ವಾಹಿನಿಗೆ ಬಂದಿದ್ದಾರೆ. ಕಾಡಿನಲ್ಲಿ ಅಡಗಿಕೊಂಡು ಜೀವನ ಸವೆಸುವ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಮತ್ತೆ ನೈಜ ಜೀವನಕ್ಕೆ ಹೊರಳುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

ಆಯುಧ ಶರಣಾಗತಿಗೆ ಹೆಚ್ಚುವರಿ ಮೊತ್ತ ಶರಣಾಗುವವರು ತಮ್ಮ ಶಸ್ತ್ರಾಸ್ತ ಅಥವಾ ಉಪಕರಣಗಳನ್ನು ಒಪ್ಪಿಸಿದರೆ ಪ್ರತೀ ಆಯುಧ ಅಥವಾ ಉಪಕರಣಕ್ಕೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಉದಾಹರಣೆಗೆ ಎ.ಕೆ.47/56/74 ರೈಫ‌ಲ್‌ಗೆ (ಒಂದು ಆಯುಧಕ್ಕೆ) 30,000 ರೂ., ಯುಎಂಜಿ/ಜಿಪಿಎಂ/ಆರ್‌ಪಿಜಿ/ ಸ್ನೆ„ಪರ್‌ ರೈಫ‌ಲ್‌ಗೆ (ಒಂದು ಆಯುಧಕ್ಕೆ) 50,000 ರೂ., ಪಿಸ್ತೂಲ್‌/ರಿವಾಲ್ವರ್‌ ಒಂದು ಆಯುಧಕ್ಕೆ 10,000 ರೂ., ಎಸ್‌ಎಎಂ ಮಿಸೈಲ್‌ (ಒಂದು ಆಯುಧಕ್ಕೆ) 40,000 ರೂ. ನೀಡಲಾಗುತ್ತದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹಣ ಮತ್ತು ಚಿನ್ನ ಕಳವು ಮಾಡಿದ ಕಾರ್ಮಿಕನಿಗೆ ಮನೆಮಂದಿ ಹಲ್ಲೆ..ವೀಡಿಯೋ ವೈರಲ್‌

Next Post

ಮುಂಬೈ: ನೀಲಿ ಚಿತ್ರ ನಿರ್ಮಿಸುತ್ತಿದ್ದ ಗುಂಪು ಬಂಧಿಸಿದ ಪೊಲೀಸರು

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
ಮುಂಬೈ: ನೀಲಿ ಚಿತ್ರ ನಿರ್ಮಿಸುತ್ತಿದ್ದ ಗುಂಪು ಬಂಧಿಸಿದ ಪೊಲೀಸರು

ಮುಂಬೈ: ನೀಲಿ ಚಿತ್ರ ನಿರ್ಮಿಸುತ್ತಿದ್ದ ಗುಂಪು ಬಂಧಿಸಿದ ಪೊಲೀಸರು

Discussion about this post

Recent News

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
42
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d