ಸುಳ್ಯ : ಸುಳ್ಯ ತಾಲೂಕಿನ ಕಸಬಾ ಗ್ರಾಮದ ಕೊಡಿಯಾಲ್ ಬೈಲಿನಲ್ಲಿರುವ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಹಲ್ಲೆ ಮಾಡಿದ ಆರೋಪದಡಿ 9 ಮಂದಿ ವಿದ್ಯಾರ್ಥಿಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಅನ್ಯಕೋಮಿನ ಪ್ರಥಮ ವರ್ಷದ ಬಿ.ಕಾಂ ಪದವಿಯನ್ನು ಓದುತ್ತಿದ್ದು, ಅದೇ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದ. ಇದರಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೆಖಿಸಲಾಗಿದೆ ಮಹಮ್ಮದ್ ಸನೀಫ್ (19) ಹಲ್ಲೆಗೆ ಒಳಗಾದ ವಿದ್ಯಾರ್ಥಿ. ಇದಕ್ಕೆ ಸಂಬಂಧಿಸಿದ ಕೆಲವು ಫೋಟೋಗಳು ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಮಾತನಾಡಿದ್ದು ತಿಳಿದ ಅದೇ ಕಾಲೇಜಿನ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿಗಳು ಅನ್ಯಕೋಮಿನ ಹುಡುಗನನ್ನು ಆಟದ ಮೈದಾನಕ್ಕೆ ಕರೆದುಕೊಂಡು ಹೋಗಿ ದೊಣ್ಣೆಯಿಂದ ಬೆನ್ನಿಗೆ ಹೊಡೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಸ್ತುತ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post