ಉಡುಪಿ/ ಮಂಗಳೂರು ಅ.31: ಉಡುಪಿ ಹಾಗೂ ಮಂಗಳೂರಿನಲ್ಲಿರುವ ಚಿನ್ನಾಭರಣಗಳ ಮಳಿಗೆ ಆಭರಣ ಜ್ಯುವೆಲ್ಲರ್ಸ್ ಇದರ ವಿವಿಧ ಮಳಿಗೆ, ಮಾಲಕರ ಮನೆಯ ಮೇಲೆ ಇಂದು ಬೆಳಗಿನ ಜಾವ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಬ್ರಹ್ಮಾವರದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗಿದೆ. ಅದೇ ರೀತಿ ಮಂಗಳೂರಿನ ಕದ್ರಿಯ ಆಭರಣ್ ಮಳಿಗೆ ಮೇಲೆ ಐಟಿ ದಾಳಿ ನಡೆದಿದೆ. ಐದಾರು ಐಟಿ ಅಧಿಕಾರಿಗಳ ತಂಡ ಜ್ಯುವೆಲ್ಲರಿಯಲ್ಲಿ ಬಿಲ್ಲಿಂಗ್ ವಿವರ, ಚಿನ್ನದ ದಾಖಲೆ ವಶಕ್ಕೆ ಪಡೆದು ಪರಿಶೀಲನೆ ನಡೆಸಿತು. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ತನಿಖೆ ನಡೆಸಲಾಗಿದೆ.
ಉಡುಪಿ ನಗರದ ಆಭರಣ್ ಮಳಿಗೆಯಲ್ಲಿ ಸುಮಾರು 15 ಅಧಿಕಾರಿಗಳು ತಪಾಸಣೆ ನಡೆಸಿದರು. ಹಾಗೆಯೇ ಜಿಲ್ಲೆಯ ಕುಂದಾಪುರ, ಹೆಬ್ರಿ, ಪಡುಬಿದ್ರೆ ಭಾಗದಲ್ಲೂ ಪರಿಶೀಲನೆ ಮಾಡಲಾಗಿದೆ. ಅದೇ ರೀತಿ ಉತ್ತರ ಕನ್ನಡದ ಕುಮಟಾದ ಹೊಸ ಬಸ್ ನಿಲ್ದಾಣದ ಬಳಿ ಇರುವ ಆಭರಣ್ ಮಳಿಗೆಯಲ್ಲೂ 12 ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ಮಾಡಿದೆ.
ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಆಭರಣ ಜ್ಯುವೆಲ್ಲರಿ ಕರ್ನಾಟಕದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಮಳಿಗೆಗಳನ್ನು ಹೊಂದಿದೆ.
Discover more from Coastal Times Kannada
Subscribe to get the latest posts sent to your email.
Discussion about this post