• About us
  • Contact us
  • Disclaimer
Wednesday, November 19, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಹೊಸ ವರ್ಷಾಚರಣೆ​ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಬಂಧನ

Coastal Times by Coastal Times
December 31, 2023
in ಕ್ರೈಮ್ ನ್ಯೂಸ್
ಮಂಗಳೂರು: ಹೊಸ ವರ್ಷಾಚರಣೆ​ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಬಂಧನ
125
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಸಿಸಿಬಿ ಪೊಲೀಸರು ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಹೊಸವರ್ಷದ ಆಚರಣೆಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 5.11 ಲಕ್ಷ ರೂ ಮೌಲ್ಯದ ಸೊತ್ತು ಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಉಳ್ಳಾಲದ ರಮೀಝ್ ಯಾನೆ ಲೆಮೇನ್ ಟಿ ರಮೀಝ್ (33) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಡಿ.30 ರಂದು ಮಂಗಳೂರು ನಗರದ ಉಳ್ಳಾಲ ತಾಲೂಕು ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಎದುರು ಫೀಜಾ ಮಾಲ್ ಮೈದಾನದ ಬಳಿ ಒಬ್ಬ ವ್ಯಕ್ತಿ ಅಕ್ರಮವಾಗಿ ಎಂಡಿ ಎಂಎ ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. , ಆರೋಪಿ ಬೆಂಗಳೂರಿನಿಂದ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಖರೀದಿ ಮಾಡಿ ತಂದು ಉಳ್ಳಾಲ ಪರಿಸರದಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದನು.

ಆರೋಪಿತನಿಂದ 5 ಲಕ್ಷ ರೂ ಮೌಲ್ಯದ 100 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮೇಲೆ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ, ದರೋಡೆಗೆ ಸಂಚು, ಕೊಲೆಯತ್ನ ಹಾಗೂ ಕೊಣಾಜೆ ಠಾಣೆಯಲ್ಲಿ ದರೋಡೆ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ.

ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ರವರ ನೇತೃತ್ವದಲ್ಲಿ ಈ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.


Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹೊಸ ವರ್ಷಾಚರಣೆಗೆ ಹೊರಾಂಗಣ ಕಾರ್ಯಕ್ರಮ ರಾತ್ರಿ 10, ಒಳಾಂಗಣ ಮಧ್ಯರಾತ್ರಿ 12.30ರವರೆಗೆ ಮಾತ್ರ ಅವಕಾಶ: ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್

Next Post

ಅಕ್ರಮವಾಗಿ ಮರ ಕಡಿದ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು

Related Posts

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ
ಕ್ರೈಮ್ ನ್ಯೂಸ್

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
64
ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ

November 14, 2025
54
Next Post
ಅಕ್ರಮವಾಗಿ ಮರ ಕಡಿದ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು

ಅಕ್ರಮವಾಗಿ ಮರ ಕಡಿದ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು

Discussion about this post

Recent News

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

November 19, 2025
32
ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್

ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್

November 19, 2025
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

November 19, 2025
ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್

ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್

November 19, 2025
300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d