ಮಂಗಳೂರು: ರೈಲ್ವೆ ಅಭಿವೃದ್ದಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ಮಂಗಳೂರಿಗೆ ಆಗಮಿಸಿರುವ ವಿ. ಸೋಮಣ್ಣ ಬುಧವಾರ ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಭೇಟಿ ನೀಡಿದರು. ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ಮೇಲ್ದರ್ಜೆ ಗೆ 2 ತಿಂಗಳೊಳಗೆ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ ನಡುವೆ ಮಂಗಳೂರು- ಕಾರವಾರ ಭಾಗದಲ್ಲಿ ರೈಲ್ವೇ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಈ ನಿಟ್ಟಿನಲ್ಲಿ ಎರಡು ತಿಂಗಳೊಳಗೆ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ನೀಲನಕ್ಷೆ ತಯಾರಿಸಲಾಗುವುದು ಎಂದು ಹೇಳಿದರು. ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ಸೆಂಟ್ರಲ್ ರೈಲ್ವೇ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು.
ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Discussion about this post