ಮಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಸಿಎಂ ಆಗಿ ಮುಂದು ವರಿಯುವ ಎಲ್ಲ ನೈತಿಕ ಹಕ್ಕನ್ನು ಸಿದ್ದರಾ ಮಯ್ಯ ಕಳೆದುಕೊಂಡಿದ್ದಾರೆ. ಅವರಿಗೆ ರಾಜ್ಯದ ಜನತೆಯ ಹಾಗೂ ನಮ್ಮ ಸಂವಿ ಧಾನದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಹುದ್ದೆಗೆ ತತ್ಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಆಗ್ರಹಿಸಿದ್ದಾರೆ.
ಮುಡಾ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ಪ್ರಕರಣವಾಗಿರದೇ, ದುರ್ಬಲ ಹಾಗೂ ಬಡವರ್ಗದ ಜನರಿಗೆ ಎಸಗಿರುವ ವಂಚನೆ ಎಂದರು. ರಾಜಕೀಯ ಜೀವನ ತೆರೆದ ಪುಸ್ತಕ ವಿದ್ದಂತೆ. ಸಣ್ಣ ಕಪ್ಪು ಚುಕ್ಕಿಯೂ ಇಲ್ಲ ಎನ್ನುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಭ್ರಷ್ಟಾಚಾರ ಎಸಗುವ ಮೂಲಕ ಜನತೆಗೆ ಮೋಸ ಮಾಡಿದ್ದಾರೆ. ಈಗ ಆರೋಪಗಳಿಗೆ ಉತ್ತರಿಸಬೇಕಿದೆ ಎಂದು ಸಂಸದರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
“ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಶನಿವಾರ ನೀಡಿದ ಅನುಮತಿಯಿಂದ ಜನ ವಿರೋಧಿ ಭ್ರಷ್ಟ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸತ್ಯಕ್ಕೆ ಜಯ ಸಿಗಲೇಬೇಕು ಎನ್ನುವುದು ಅರ್ಥವಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಚಾರದ ಪ್ರಕರಣವಾಗಿರದೇ, ದುರ್ಬಲ, ಬಡ ವರ್ಗದ ಜನರಿಗೆ ಎಸಗಿರುವ ವಂಚನೆಯಾಗಿದೆ.
“ಪ್ರಜಾಪ್ರಭುತ್ವದ ಮೇಲೆ ಜನತೆಗಿರುವ ನಂಬಿಕೆ ಉಳಿಸಲು, ಸಿದ್ದರಾಮಯ್ಯ ಅವರು ಈ ಕೂಡಲೇ ಸಿಎಂ ಸ್ಥಾನ ತ್ಯಜಿಸುವ ಸಮಯ ಬಂದಿದ್ದು, ತಮ್ಮ ವಿರುದ್ದ ಕೇಳಿಬಂದಿರುವ ಎಲ್ಲಾ ಆರೋಪಗಳಿಗೆ ಜನತೆ ಮುಂದೆ ಉತ್ತರಿಸಲಿ” ಎಂದು ಸಂಸದ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
Discussion about this post