ಉಡುಪಿ ಜ 14 : ಸಹಕಾರ ಭಾರತಿ ಉಡುಪಿ ಜಿಲ್ಲಾ ಮಿಲ್ಕ್ ಪ್ರಕೋಷ್ಠದ ಪ್ರಮುಖರು ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಸಾಣೂರು ನರಸಿಂಹ ಕಾಮತ್ ರ ವರು ಅಜೆಕಾರುಅಜೆಕಾರು ರಾಮಮಂದಿರದಲ್ಲಿ ಜರುಗಿದ ಕಾರ್ಕಳ ತಾಲೂಕು ಸಹಕಾರ ಭಾರತಿ ಸಂಸ್ಥಾಪಕರ ದಿನಾಚರಣೆಯ ದಿಕ್ಸೂಚಿ ಭಾಷಣ ಮಾಡುತ್ತಾ,
ಸಹಕಾರ ತತ್ವ ಎಲ್ಲರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಸಹಕಾರಿ ಕ್ಷೇತ್ರ ಸರ್ವವ್ಯಾಪಿ ಸರ್ವಸ್ಪರ್ಶಿ ಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಭರವಸೆಯ ಆಶಾಕಿರಣವಾಗಿದೆ.
ಸಹಕಾರ ಭಾರತಿ ಸಂಘಟನೆ” ವ್ಯಕ್ತಿ* ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ “ದ ಜೊತೆಗೆ ಸಹಕಾರಿ ಕ್ಷೇತ್ರದ ಶುದ್ಧೀಕರಣ, ಅಭಿವೃದ್ಧಿ ಕರಣ ಮತ್ತು ಆಧುನೀಕರಣಕ್ಕೆ ಸಂಘಟನಾತ್ಮಕ ರಚನಾತ್ಮಕ ,ಆಂದೋಲನ ತ್ಮಕ ಮತ್ತು ಪ್ರಾತಿನಿಧ್ಯಾತ್ಮಕ ವಾಗಿ ರಾಷ್ಟ್ರವ್ಯಾಪಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
ಸಹಕಾರ ಭಾರತಿ ಸಂಸ್ಥಾಪಕರಾದ ಸ್ವರ್ಗೀಯ ಶ್ರೀ ಲಕ್ಷ್ಮಣ್ ರಾವ್ ಇನಾಮ್ದಾರ್ ರವರ ದೂರದರ್ಶಿತ್ವ ಪರಿಶ್ರಮ ಮತ್ತು ಮಾಣಿಕತೆಯ ಫಲಸ್ವರೂಪವಾಗಿ ಸಹಕಾರ ಭಾರತಿ ದೇಶದ 27 ರಾಜ್ಯಗಳ 650ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಂಘಟನಾತ್ಮಕವಾಗಿ ಬಲವಾಗಿ ಬೇರೂರಿದೆ, ಸಹಕಾರ ಭಾರತಿ ನಿರಂತರವಾಗಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ಜೊತೆಗೆ ಸಮಾಲೋಚನೆ ನಡೆಸಿ ಸಹಕಾರ ಕ್ಷೇತ್ರದ ಕಾಯ್ದೆಗಳ ಸರಳೀಕರಣ, ವ್ಯವಸ್ಥೆಯಲ್ಲಿ ಆಧುನೀಕರಣ, ಆಡಳಿತದಲ್ಲಿ ಪಾರದರ್ಶಕತೆ ಗೆ ಹಲವಾರು ಸುಧಾರಣೆಗಳನ್ನು ತರುವಲ್ಲಿ ನಿರಂತರವಾಗಿ ಕಾರ್ಯಪ್ರವೃತ್ತವಾಗಿದೆ.
ಸಹಕಾರ ಭಾರತಿಯ ಕಾರ್ಯಕರ್ತರು ನಿರಂತರ ಅಧ್ಯಯನ, ವೃತ್ತಿಪರತೆ ಮತ್ತು ಸಕ್ರಿಯ ತೊಡಗಿಸಿಕೊಳ್ಳುವಿಕೆ ಯಿಂದ ಸಹಕಾರ ಕ್ಷೇತ್ರಕ್ಕೆ ಹೊಸ ಆಯಾಮವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕೆಂದು ತಿಳಿಸಿದರು.
ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಭವಾನಿ ಶಂಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರ ಭಾರತಿಯ ಅಧ್ಯಕ್ಷರಾದ ಶ್ರೀ ಬೋಳ ಸದಾಶಿವ ಶೆಟ್ಟಿಯವರು ಸಹಕಾರ ಭಾರತಿಯ ಸದಸ್ಯತಾ ಅಭಿಯಾನ, ಸಂಘಟನಾತ್ಮಕ ವಿಚಾರಗಳು ಮತ್ತು ತಳಮಟ್ಟದಲ್ಲಿ ಇನ್ನಷ್ಟು ಭದ್ರವಾಗಿ ಸಂಘಟನೆಯನ್ನು ಕಟ್ಟಿ ಬೆಳೆಸಬೇಕಾದ ಅವಶ್ಯಕತೆಯ ಬಗ್ಗೆ ಸವಿವರ ಮಾಹಿತಿ ನೀಡಿದರು.
ಕ್ಯಾಮ್ಕೋ ದ ನಿರ್ದೇಶಕರಾದ ಶ್ರೀ ದಯಾನಂದ ಹೆಗಡೆ, ಸಹಕಾರ ಭಾರತಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಮಧುಸೂದನ್ ನಾಯಕ್ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಾರ್ಕಳ ಸಹಕಾರ ಭಾರತೀಯ ಅಧ್ಯಕ್ಷರಾದ ಶ್ರೀ ಹರೀಶ್ ಕಲ್ಯಾ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಸಮಾರಂಭದಲ್ಲಿ ಕಡ್ತಲ ಪರಿಸರದ ಹಿರಿಯ ಸಹಕಾರಿ ಗಳಾದ ಶ್ರೀರಾಮಚಂದ್ರ ನಾಯಕ್ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ನಿರ್ದೇಶಕರಾಗಿ ಆಯ್ಕೆಯಾದ ಶ್ರೀ ಬೋಳ ಸದಾಶಿವ ಶೆಟ್ಟಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಸಹಕಾರ ಭಾರತಿಯ ಉಡುಪಿ ಜಿಲ್ಲಾ ಮಹಿಳಾ ಪ್ರಮುಖ್ ಮತ್ತು ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶ್ರೀಮತಿ ವಿದ್ಯಾ ಪೈಯವರು ಕಾರ್ಯಕ್ರಮ ನಿರೂಪಿಸಿ, ಇನ್ನೋರ್ವ ನಿರ್ದೇಶಕರಾದ ಶ್ರೀ ಪ್ರಶಾಂತ ಶೆಟ್ಟಿ ಯವರು ಧನ್ಯವಾದ ಸಮರ್ಪಣೆ ಗೈದರು.
ಕಾರ್ಕಳ ತಾಲೂಕಿನ ಸಹಕಾರ ಭಾರತಿಯ ಪದಾಧಿಕಾರಿಗಳು, ವಿವಿಧ ಸಹಕಾರಿ ಸಂಸ್ಥೆಗಳ ನಿರ್ದೇಶಕರುಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
Discussion about this post